<p><strong>ಹುಬ್ಬಳ್ಳಿ:</strong> ಮಹದಾಯಿ ವಿವಾದ ಇತ್ಯರ್ಥಕ್ಕೆ ಒತ್ತಾಯಿಸಿ ಪ್ರಧಾನಿ ಮೋದಿ ಅವರಿಗೆ ಮುತ್ತಿಗೆ ಹಾಕುವ ಸಲುವಾಗಿ ಬೆಂಗಳೂರಿಗೆ ತೆರಳುತ್ತಿದ್ದ ನವಲಗುಂದ ರೈತ ಹೋರಾಟಗಾರರನ್ನು ಪೊಲೀಸರು ದಸ್ತಗಿರಿ ಮಾಡಿದರು.</p>.<p>ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಅಧ್ಯಕ್ಷ ಲೋಕನಾಥ ಹೆಬಸೂರ ಸೇರಿದಂತೆ ಹಲವು ರೈತರನ್ನು ಪೊಲೀಸರು ಧಾರವಾಡಕ್ಕೆ ಕರೆದೊಯ್ಯುತ್ತಿದ್ದಾರೆ.</p>.<p>ರೈಲಿನ ಮೂಲಕ ಬೆಂಗಳೂರಿಗೆ ತೆರಳಲು ಹುಬ್ಬಳ್ಳಿಯತ್ತ ಬರುತ್ತಿದ್ದ ರೈತರನ್ನು ಪೊಲೀಸರು ಗೊಬ್ಬರಗುಂಪಿ, ಹೆಬಸೂರು ಗ್ರಾಮಗಳ ಬಳಿ ದಸ್ತಗಿರಿ ಮಾಡಿದರು.</p>.<p>ಇಷ್ಟಾಗಿಯೂ ಪೊಲೀಸರ ಕಣ್ತಪ್ಪಿಸಿ 19 ರೈತರು ರೈಲು ನಿಲ್ದಾಣ ತಲುಪಿದರು. ಹುಬ್ಬಳ್ಳಿ ಹಾಗೂ ನವಲಗುಂದ ತಾಲ್ಲೂಕಿನ ಸುಮಾರು 130 ರೈತರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.</p>.<p><strong>ಧಾರವಾಡದಲ್ಲಿ 40ಕ್ಕೂ ಹೆಚ್ಚು ಮಹದಾಯಿ ಹೋರಾಟಗಾರರ ಬಂಧನ </strong></p>.<p></p><p><strong>ಧಾರವಾಡ:</strong> ನವಲಗುಂದ ಮೂಲದ 40ಕ್ಕೂ ಹೆಚ್ಚು ಮಹದಾಯಿ ಹೋರಾಟಗಾರರು ಪೊಲೀಸರ ಸುಪರ್ದಿಯಲ್ಲಿದ್ದಾರೆ.</p><p>ಪ್ರಧಾನಿ ಮೊದಿಗೆ ಮುತ್ತಿಗೆ ಹಾಕಲು ಹೊರಟಿದ್ದ ರೈತರನ್ನು ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನಲ್ಲಿ ಬಂಧಿಸಲಾಗಿದೆ. </p><p>ಬಂಧಿತ ಹೋರಾಟಗಾರರನ್ನು ಪೊಲೀಸರು ಧಾರವಾಡ ಜಿಲ್ಲಾ ಡಿಆರ್ ಮೈದಾನಕ್ಕೆ ಕರೆತಂದರು.</p><p>ಇಂದು ರಾತ್ರಿ ಮೈದಾನದಲ್ಲಿ ಮಹದಾಯಿ ಹೋರಾಟಗಾರರು ವಾಸ್ತವ್ಯ ಹೂಡಲು ಪೊಲೀಸರ ವ್ಯವಸ್ಥೆ ಕಲ್ಪಿಸಿದ್ದಾರೆ. </p></p></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಮಹದಾಯಿ ವಿವಾದ ಇತ್ಯರ್ಥಕ್ಕೆ ಒತ್ತಾಯಿಸಿ ಪ್ರಧಾನಿ ಮೋದಿ ಅವರಿಗೆ ಮುತ್ತಿಗೆ ಹಾಕುವ ಸಲುವಾಗಿ ಬೆಂಗಳೂರಿಗೆ ತೆರಳುತ್ತಿದ್ದ ನವಲಗುಂದ ರೈತ ಹೋರಾಟಗಾರರನ್ನು ಪೊಲೀಸರು ದಸ್ತಗಿರಿ ಮಾಡಿದರು.</p>.<p>ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಅಧ್ಯಕ್ಷ ಲೋಕನಾಥ ಹೆಬಸೂರ ಸೇರಿದಂತೆ ಹಲವು ರೈತರನ್ನು ಪೊಲೀಸರು ಧಾರವಾಡಕ್ಕೆ ಕರೆದೊಯ್ಯುತ್ತಿದ್ದಾರೆ.</p>.<p>ರೈಲಿನ ಮೂಲಕ ಬೆಂಗಳೂರಿಗೆ ತೆರಳಲು ಹುಬ್ಬಳ್ಳಿಯತ್ತ ಬರುತ್ತಿದ್ದ ರೈತರನ್ನು ಪೊಲೀಸರು ಗೊಬ್ಬರಗುಂಪಿ, ಹೆಬಸೂರು ಗ್ರಾಮಗಳ ಬಳಿ ದಸ್ತಗಿರಿ ಮಾಡಿದರು.</p>.<p>ಇಷ್ಟಾಗಿಯೂ ಪೊಲೀಸರ ಕಣ್ತಪ್ಪಿಸಿ 19 ರೈತರು ರೈಲು ನಿಲ್ದಾಣ ತಲುಪಿದರು. ಹುಬ್ಬಳ್ಳಿ ಹಾಗೂ ನವಲಗುಂದ ತಾಲ್ಲೂಕಿನ ಸುಮಾರು 130 ರೈತರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.</p>.<p><strong>ಧಾರವಾಡದಲ್ಲಿ 40ಕ್ಕೂ ಹೆಚ್ಚು ಮಹದಾಯಿ ಹೋರಾಟಗಾರರ ಬಂಧನ </strong></p>.<p></p><p><strong>ಧಾರವಾಡ:</strong> ನವಲಗುಂದ ಮೂಲದ 40ಕ್ಕೂ ಹೆಚ್ಚು ಮಹದಾಯಿ ಹೋರಾಟಗಾರರು ಪೊಲೀಸರ ಸುಪರ್ದಿಯಲ್ಲಿದ್ದಾರೆ.</p><p>ಪ್ರಧಾನಿ ಮೊದಿಗೆ ಮುತ್ತಿಗೆ ಹಾಕಲು ಹೊರಟಿದ್ದ ರೈತರನ್ನು ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನಲ್ಲಿ ಬಂಧಿಸಲಾಗಿದೆ. </p><p>ಬಂಧಿತ ಹೋರಾಟಗಾರರನ್ನು ಪೊಲೀಸರು ಧಾರವಾಡ ಜಿಲ್ಲಾ ಡಿಆರ್ ಮೈದಾನಕ್ಕೆ ಕರೆತಂದರು.</p><p>ಇಂದು ರಾತ್ರಿ ಮೈದಾನದಲ್ಲಿ ಮಹದಾಯಿ ಹೋರಾಟಗಾರರು ವಾಸ್ತವ್ಯ ಹೂಡಲು ಪೊಲೀಸರ ವ್ಯವಸ್ಥೆ ಕಲ್ಪಿಸಿದ್ದಾರೆ. </p></p></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>