<p><strong>ಹುಬ್ಬಳ್ಳಿ: </strong>‘ರಾಜ್ಯಕ್ಕೆ ಮಹದಾಯಿ ನೀರನ್ನು ನೀಡುವುದಾಗಿ ಗೋವಾ ಸರ್ಕಾರ ಆದೇಶ ಹೊರಡಿಸಿದರೆ, ಅಲ್ಲಿನ ಕಾಂಗ್ರೆಸ್ ಮುಖಂಡರೊಂದಿಗೆ ನಾವೂ ಮಾತನಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಶನಿವಾರ ಇಲ್ಲಿ ಹೇಳಿದರು.</p>.<p>ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ವಿಷಯವಾಗಿ ಹೈಕಮಾಂಡ್ ಜತೆಗೂ ಮಾತನಾಡುವುದಾಗಿ ತಿಳಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಾ ಮುಖ್ಯಮಂತ್ರಿಗೆ 16 ಬಾರಿ ಪತ್ರ ಬರೆದಿದ್ದಾರೆ. ಒಂದಕ್ಕೂ ಉತ್ತರಿಸಿಲ್ಲ. ಆದರೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಲವ್ ಲೆಟರ್ ಬರೆದಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಸ್ವಾಮೀಜಿಗಳಾದವರು ಅರಿಷಡ್ವರ್ಗಗಳನ್ನು ಬಿಡುತ್ತಾರೆ. ಆದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗುವುದಕ್ಕಾಗಿ ಯೋಗಿ ಆದಿತ್ಯನಾಥ ಅವರು ಧರ್ಮವನ್ನೇ ಬಿಟ್ಟಿದ್ದಾರೆ’ ಎಂದು ಟೀಕಿಸಿದ ಅವರು, ‘ಟಿಪ್ಪು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ಯೋಧ. ಅವರನ್ನು ಟೀಕಿಸುವ ಆದಿತ್ಯನಾಥ ಅವರಿಗೆ ಸ್ವಾತಂತ್ರ್ಯ ಇತಿಹಾಸ ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ರಾಜ್ಯಕ್ಕೆ ಮಹದಾಯಿ ನೀರನ್ನು ನೀಡುವುದಾಗಿ ಗೋವಾ ಸರ್ಕಾರ ಆದೇಶ ಹೊರಡಿಸಿದರೆ, ಅಲ್ಲಿನ ಕಾಂಗ್ರೆಸ್ ಮುಖಂಡರೊಂದಿಗೆ ನಾವೂ ಮಾತನಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಶನಿವಾರ ಇಲ್ಲಿ ಹೇಳಿದರು.</p>.<p>ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ವಿಷಯವಾಗಿ ಹೈಕಮಾಂಡ್ ಜತೆಗೂ ಮಾತನಾಡುವುದಾಗಿ ತಿಳಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಾ ಮುಖ್ಯಮಂತ್ರಿಗೆ 16 ಬಾರಿ ಪತ್ರ ಬರೆದಿದ್ದಾರೆ. ಒಂದಕ್ಕೂ ಉತ್ತರಿಸಿಲ್ಲ. ಆದರೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಲವ್ ಲೆಟರ್ ಬರೆದಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಸ್ವಾಮೀಜಿಗಳಾದವರು ಅರಿಷಡ್ವರ್ಗಗಳನ್ನು ಬಿಡುತ್ತಾರೆ. ಆದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗುವುದಕ್ಕಾಗಿ ಯೋಗಿ ಆದಿತ್ಯನಾಥ ಅವರು ಧರ್ಮವನ್ನೇ ಬಿಟ್ಟಿದ್ದಾರೆ’ ಎಂದು ಟೀಕಿಸಿದ ಅವರು, ‘ಟಿಪ್ಪು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ಯೋಧ. ಅವರನ್ನು ಟೀಕಿಸುವ ಆದಿತ್ಯನಾಥ ಅವರಿಗೆ ಸ್ವಾತಂತ್ರ್ಯ ಇತಿಹಾಸ ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>