ಬೆಂಗಳೂರು: ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನಲ್ಲಿ ಶೇ 25ರಷ್ಟು ಮಾತ್ರ ಪೂರೈಕೆ ಆಗುತ್ತಿದೆ. ಆದರೂ ಗ್ರಾಹಕರಿಗೆ ವಿದ್ಯುತ್ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಬಗ್ಗೆ ಚಿಂತೆ ಬೇಡ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.