<p><strong>ಪಾವಗಡ: </strong>ತಾಲ್ಲೂಕಿನ ರಂಗಸಮುದ್ರದ ತಿಪ್ಪೇರುದ್ರಸ್ವಾಮಿ ದೇಗುಲದಲ್ಲಿ ಜಾತ್ರೆ ಪ್ರಯುಕ್ತ ವಿತರಿಸಿದ್ದ ಪ್ರಸಾದ ಸೇವಿಸಿ 230ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.</p>.<p>ಗ್ರಾಮದಲ್ಲಿ ಮಂಗಳವಾರ ಸಂಜೆ ಜಾತ್ರೆಯ ಕಡೆ ದಿನವಾಗಿದ್ದರಿಂದ ಸುಮಾರು 300 ಭಕ್ತರಿಗೆ ದೇಗುಲದಲ್ಲಿ ಪುಳಿಯೊಗರೆ, ಮೊಸರನ್ನವನ್ನು<br /> ವಿತರಿಸಲಾಗಿತ್ತು.</p>.<p>ರಾತ್ರಿ ಹೊಟ್ಟೆನೋವು, ಭೇದಿಯಿಂದ ಬಳಲುತ್ತಿದ್ದವರನ್ನು ಚಿಕಿತ್ಸೆಗಾಗಿ ಪಟ್ಟಣ ಮತ್ತು ಲಿಂಗದಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಹಶೀಲ್ದಾರ್ ಟಿ.ಕೆ. ತಿಪ್ಪೂರಾವ್ ಮತ್ತು ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಗ್ರಾಮದಲ್ಲಿ ಹೆಚ್ಚುವರಿ ವೈದ್ಯರನ್ನು ನಿಯೋಜಿಸಲಾಗಿದೆ.</p>.<p>‘ಪ್ರಸಾದದಲ್ಲಿ ವಿಷದ ಅಂಶ ಇತ್ತು ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಆಹಾರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸ್ಪಷ್ಟ ಕಾರಣ ತಿಳಿಯಲಿದೆ’ ಎಂದು ತಿಪ್ಪೂರಾವ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ: </strong>ತಾಲ್ಲೂಕಿನ ರಂಗಸಮುದ್ರದ ತಿಪ್ಪೇರುದ್ರಸ್ವಾಮಿ ದೇಗುಲದಲ್ಲಿ ಜಾತ್ರೆ ಪ್ರಯುಕ್ತ ವಿತರಿಸಿದ್ದ ಪ್ರಸಾದ ಸೇವಿಸಿ 230ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.</p>.<p>ಗ್ರಾಮದಲ್ಲಿ ಮಂಗಳವಾರ ಸಂಜೆ ಜಾತ್ರೆಯ ಕಡೆ ದಿನವಾಗಿದ್ದರಿಂದ ಸುಮಾರು 300 ಭಕ್ತರಿಗೆ ದೇಗುಲದಲ್ಲಿ ಪುಳಿಯೊಗರೆ, ಮೊಸರನ್ನವನ್ನು<br /> ವಿತರಿಸಲಾಗಿತ್ತು.</p>.<p>ರಾತ್ರಿ ಹೊಟ್ಟೆನೋವು, ಭೇದಿಯಿಂದ ಬಳಲುತ್ತಿದ್ದವರನ್ನು ಚಿಕಿತ್ಸೆಗಾಗಿ ಪಟ್ಟಣ ಮತ್ತು ಲಿಂಗದಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಹಶೀಲ್ದಾರ್ ಟಿ.ಕೆ. ತಿಪ್ಪೂರಾವ್ ಮತ್ತು ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಗ್ರಾಮದಲ್ಲಿ ಹೆಚ್ಚುವರಿ ವೈದ್ಯರನ್ನು ನಿಯೋಜಿಸಲಾಗಿದೆ.</p>.<p>‘ಪ್ರಸಾದದಲ್ಲಿ ವಿಷದ ಅಂಶ ಇತ್ತು ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಆಹಾರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸ್ಪಷ್ಟ ಕಾರಣ ತಿಳಿಯಲಿದೆ’ ಎಂದು ತಿಪ್ಪೂರಾವ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>