ಸಮಾಜ ಕಲ್ಯಾಣ ಯೋಜನೆಗಳ ಅಡಿ ವೃದ್ಧಾಶ್ರಮಗಳು, ಭಿಕ್ಷುಕರ ಪುನರ್ವಸತಿ ಕೇಂದ್ರಗಳು, ನಿರಾಶ್ರಿತರ ಕೇಂದ್ರ ಮತ್ತು ವಿದ್ಯಾರ್ಥಿ ನಿಲಯಗಳಿಗಾಗಿ ಪ್ರತಿ ವರ್ಷ ರಾಜ್ಯಕ್ಕೆ ಕೇಂದ್ರ ಸರ್ಕಾರ 65,714 ಟನ್ ಆಹಾರ ಧಾನ್ಯವನ್ನು ಮಂಜೂರು ಮಾಡುತ್ತಿದೆ. ಧಾನ್ಯ ಪೂರೈಕೆ ಪುನರಾರಂಭಕ್ಕೆ ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತಕ್ಷಣವೇ ಫಲಾನುಭವಿಗಳ ಪಟ್ಟಿಯನ್ನು ಕೇಂದ್ರಕ್ಕೆ ಸಲ್ಲಿಸಬೇಕು ಎಂದರು.