<p><strong>ಬೆಂಗಳೂರು:</strong> ‘ಮೋದಿಗೆ ಜೀ ಹುಜೂರ್ ಎನ್ನದಿದ್ದರೆ ಯಾರಿಗೂ ಉಳಿಗಾಲ ಇಲ್ಲ ಎಂಬ ಸ್ಥಿತಿ ಬಿಜೆಪಿಯಲ್ಲಿದೆ’ ಎಂದು ಇತ್ತೀಚೆಗೆ ಕಾಂಗ್ರೆಸ್ ಸೇರಿದ ಸಿ.ಎಚ್. ವಿಜಯಶಂಕರ್ ವಾಗ್ದಾಳಿ ನಡೆಸಿದರು.</p>.<p>‘ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಉಳಿದಿಲ್ಲ. ಯಡಿಯೂರಪ್ಪನವರಂಥ ಹಿರಿಯ ನಾಯಕರು ಅಮಿತ್ ಶಾ ಮುಂದೆ ಮಂಡಿ ಊರುತ್ತಾರೆ. ಕಾಲು ಮುಟ್ಟಿ ನಮಸ್ಕರಿಸುತ್ತಾರೆ’ ಎಂದು ಮಾಧ್ಯಮಗೋಷ್ಠಿಯಲ್ಲಿ ಗುರುವಾರ ವ್ಯಂಗ್ಯವಾಡಿದರು.</p>.<p>‘ಈ ವಿಷಯ ಆ ಪಕ್ಷದ ಅನೇಕ ಕಾರ್ಯಕರ್ತರಿಗೆ ಗೊತ್ತಿದೆ. ಆದರೆ, ಯಾರೂ ಬಹಿರಂಗವಾಗಿ ಹೇಳಿಕೊಳ್ಳುತ್ತಿಲ್ಲ’ ಎಂದರು.</p>.<p>‘ಅಂಬೇಡ್ಕರ್ ರಚಿಸಿದ ಸಂವಿಧಾನದ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಮೋದಿ ಸಂಪುಟದ ಸಹೋದ್ಯೋಗಿ ಅನಂತ್ ಕುಮಾರ್ ಹೆಗಡೆ ಸಂವಿಧಾನವನ್ನೇ ಬದಲಿಸಬೇಕು ಎಂದು ಹೇಳುತ್ತಾರೆ. ಆದರೆ, ಬಿಜೆಪಿಯ ಯಾರಿಗೂ ಅದು ತಪ್ಪು ಎನಿಸಲಿಲ್ಲ. ಹೆಗಡೆ ಹೇಳಿರುವುದೇ ಮೋದಿ ಮನಸ್ಸಿನಲ್ಲಿದೆ ಅನಿಸುತ್ತದೆ’ ಎಂದರು.</p>.<p>‘ಭ್ರಷ್ಟಾಚಾರ ಮುಕ್ತ ಭಾರತಕ್ಕಾಗಿ ಮತ ನೀಡಿ ಎಂದು ಹೇಳಿದ್ದ ಮೋದಿ, ಈಗ ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಮತ ನೀಡಿ ಎಂದು ಹೇಳುತ್ತಾರೆ. ಪ್ರಜಾಸತ್ತಾತ್ಮಕ ವ್ಯವಸ್ಥೆ ಮೇಲೆ ಪ್ರಧಾನಿಗೆ ನಂಬಿಕೆ ಇಲ್ಲ’ ಎಂದೂ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ವಾಜಪೇಯಿ, ಅಡ್ವಾಣಿ ಭಾವಚಿತ್ರ ಬಿಜೆಪಿಯವರ ಬಳಿ ಕಾಣಿಸುತ್ತಿಲ್ಲ. ಇಂಥ ನಾಯಕರನ್ನು ರಾಜಕೀಯವಾಗಿ ಮುಗಿಸಿ ಮೂಲೆಗುಂಪು ಮಾಡಲಾಗಿದೆ. ದೇಶದಲ್ಲಿ ಮುಂದೆ ತುರ್ತುಪರಿಸ್ಥಿತಿ ಬಂದರೆ ಆಶ್ಚರ್ಯ ಇಲ್ಲ ಎಂದು ಅಡ್ವಾಣಿಯವರೇ ಹೇಳಿದ್ದರು’ ಎಂದು ನೆನಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮೋದಿಗೆ ಜೀ ಹುಜೂರ್ ಎನ್ನದಿದ್ದರೆ ಯಾರಿಗೂ ಉಳಿಗಾಲ ಇಲ್ಲ ಎಂಬ ಸ್ಥಿತಿ ಬಿಜೆಪಿಯಲ್ಲಿದೆ’ ಎಂದು ಇತ್ತೀಚೆಗೆ ಕಾಂಗ್ರೆಸ್ ಸೇರಿದ ಸಿ.ಎಚ್. ವಿಜಯಶಂಕರ್ ವಾಗ್ದಾಳಿ ನಡೆಸಿದರು.</p>.<p>‘ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಉಳಿದಿಲ್ಲ. ಯಡಿಯೂರಪ್ಪನವರಂಥ ಹಿರಿಯ ನಾಯಕರು ಅಮಿತ್ ಶಾ ಮುಂದೆ ಮಂಡಿ ಊರುತ್ತಾರೆ. ಕಾಲು ಮುಟ್ಟಿ ನಮಸ್ಕರಿಸುತ್ತಾರೆ’ ಎಂದು ಮಾಧ್ಯಮಗೋಷ್ಠಿಯಲ್ಲಿ ಗುರುವಾರ ವ್ಯಂಗ್ಯವಾಡಿದರು.</p>.<p>‘ಈ ವಿಷಯ ಆ ಪಕ್ಷದ ಅನೇಕ ಕಾರ್ಯಕರ್ತರಿಗೆ ಗೊತ್ತಿದೆ. ಆದರೆ, ಯಾರೂ ಬಹಿರಂಗವಾಗಿ ಹೇಳಿಕೊಳ್ಳುತ್ತಿಲ್ಲ’ ಎಂದರು.</p>.<p>‘ಅಂಬೇಡ್ಕರ್ ರಚಿಸಿದ ಸಂವಿಧಾನದ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಮೋದಿ ಸಂಪುಟದ ಸಹೋದ್ಯೋಗಿ ಅನಂತ್ ಕುಮಾರ್ ಹೆಗಡೆ ಸಂವಿಧಾನವನ್ನೇ ಬದಲಿಸಬೇಕು ಎಂದು ಹೇಳುತ್ತಾರೆ. ಆದರೆ, ಬಿಜೆಪಿಯ ಯಾರಿಗೂ ಅದು ತಪ್ಪು ಎನಿಸಲಿಲ್ಲ. ಹೆಗಡೆ ಹೇಳಿರುವುದೇ ಮೋದಿ ಮನಸ್ಸಿನಲ್ಲಿದೆ ಅನಿಸುತ್ತದೆ’ ಎಂದರು.</p>.<p>‘ಭ್ರಷ್ಟಾಚಾರ ಮುಕ್ತ ಭಾರತಕ್ಕಾಗಿ ಮತ ನೀಡಿ ಎಂದು ಹೇಳಿದ್ದ ಮೋದಿ, ಈಗ ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಮತ ನೀಡಿ ಎಂದು ಹೇಳುತ್ತಾರೆ. ಪ್ರಜಾಸತ್ತಾತ್ಮಕ ವ್ಯವಸ್ಥೆ ಮೇಲೆ ಪ್ರಧಾನಿಗೆ ನಂಬಿಕೆ ಇಲ್ಲ’ ಎಂದೂ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ವಾಜಪೇಯಿ, ಅಡ್ವಾಣಿ ಭಾವಚಿತ್ರ ಬಿಜೆಪಿಯವರ ಬಳಿ ಕಾಣಿಸುತ್ತಿಲ್ಲ. ಇಂಥ ನಾಯಕರನ್ನು ರಾಜಕೀಯವಾಗಿ ಮುಗಿಸಿ ಮೂಲೆಗುಂಪು ಮಾಡಲಾಗಿದೆ. ದೇಶದಲ್ಲಿ ಮುಂದೆ ತುರ್ತುಪರಿಸ್ಥಿತಿ ಬಂದರೆ ಆಶ್ಚರ್ಯ ಇಲ್ಲ ಎಂದು ಅಡ್ವಾಣಿಯವರೇ ಹೇಳಿದ್ದರು’ ಎಂದು ನೆನಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>