‘ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯಂತೆ, ರೈತರ ಉತ್ಪನ್ನಗಳಿಗೆ ನ್ಯಾಯಯುತ, ಲಾಭದಾಯಕ ಬೆಂಬಲ ಬೆಲೆ ನಿಗದಿ ಪಡಿಸಬೇಕು’ ಎಂದ ಅವರು, ‘25 ವರ್ಷಗಳಲ್ಲಿ ರೈತರ ಆದಾಯ ಕೇವಲ 0.50ರಷ್ಟು ಏರಿಕೆಯಾಗಿದೆ. ಆದರೆ, ಶಾಸಕ ಹಾಗೂ ಸಂಸದರ ಆದಾಯ ಸಾವಿರಾರು ಪಟ್ಟು ಏರಿಕೆಯಾಗಿದೆ. ಅಲ್ಲದೆ, ಸರ್ಕಾರಿ ನೌಕರರಿಗೆ ವೇತನ ಆಯೋಗದ ಶಿಫಾರಸಿನಂತೆ ಲಕ್ಷ ಪಟ್ಟು ಹೆಚ್ಚಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.