<p><strong>ಮೈಸೂರು: </strong>ಬಿಜೆಪಿ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಾಸ್ತವ್ಯ ಹೂಡಿರುವ ರ್ಯಾಡಿಸನ್ ಬ್ಲೂ ಹೋಟೆಲ್ ಎದುರು ಬಿಗಿ ಭದ್ರತೆ ಕಲ್ಪಿಸಲಾಗಿದೆ.</p>.<p>ಭಾನುವಾರ ರಾತ್ರಿ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೋದಿ ಅವರು ಈ ಹೋಟೆಲ್ನಲ್ಲಿ ತಂಗಿದ್ದಾರೆ. ಹೆಚ್ಚಿನ ಭದ್ರತೆ ಒದಗಿಸಿದ್ದು, ಮಾಲ್ ಆಫ್ ಮೈಸೂರ್ ತೆರೆದಿದ್ದರು ವಹಿವಾಟು ನಡೆಯುತ್ತಿಲ್ಲ.</p>.<p>ತರಕಾರಿ ಮಾರುಕಟ್ಟೆ ವಹಿವಾಟಿಗೆ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ. ಹೋಟೆಲ್ ಸಮೀಪದ ಎಲ್ಲ ರಸ್ತೆಗಳಲ್ಲೂ ಬ್ಯಾರಿಕೇಡ್ ಹಾಕಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ತೆರಳುವ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಾಗುತ್ತಿವೆ.</p>.<p>ಬಿಜೆಪಿ ಮುಖಂಡರಿಗೆ ಮಾತ್ರ ಹೋಟೆಲ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿಯನ್ನು ಕಾಣಲು ಹೋಟೆಲ್ ಎದುರು ಸಾರ್ವಜನಿಕರು ಕಾತುರದಿಂದ ಕಾಯುತ್ತಿದ್ದಾರೆ.</p>.<p><strong>* ಇವನ್ನೂ ಓದಿ...</strong></p>.<p><strong>* <a href="http://www.prajavani.net/news/article/2018/02/19/555042.html">ಪ್ರಧಾನಿ ಮೋದಿಗೆ ಮೈಸೂರಿನ ವಿಮಾನನಿಲ್ದಾಣದಲ್ಲಿ ಸಿಎಂ ಸ್ವಾಗತ</a><br /> * <a href="http://elections.prajavani.net/article/modi-mysore-shaw-coast-379">ಮೈಸೂರಿಗೆ ಮೋದಿ; ಕರಾವಳಿಗೆ ಶಾ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಬಿಜೆಪಿ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಾಸ್ತವ್ಯ ಹೂಡಿರುವ ರ್ಯಾಡಿಸನ್ ಬ್ಲೂ ಹೋಟೆಲ್ ಎದುರು ಬಿಗಿ ಭದ್ರತೆ ಕಲ್ಪಿಸಲಾಗಿದೆ.</p>.<p>ಭಾನುವಾರ ರಾತ್ರಿ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೋದಿ ಅವರು ಈ ಹೋಟೆಲ್ನಲ್ಲಿ ತಂಗಿದ್ದಾರೆ. ಹೆಚ್ಚಿನ ಭದ್ರತೆ ಒದಗಿಸಿದ್ದು, ಮಾಲ್ ಆಫ್ ಮೈಸೂರ್ ತೆರೆದಿದ್ದರು ವಹಿವಾಟು ನಡೆಯುತ್ತಿಲ್ಲ.</p>.<p>ತರಕಾರಿ ಮಾರುಕಟ್ಟೆ ವಹಿವಾಟಿಗೆ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ. ಹೋಟೆಲ್ ಸಮೀಪದ ಎಲ್ಲ ರಸ್ತೆಗಳಲ್ಲೂ ಬ್ಯಾರಿಕೇಡ್ ಹಾಕಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ತೆರಳುವ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಾಗುತ್ತಿವೆ.</p>.<p>ಬಿಜೆಪಿ ಮುಖಂಡರಿಗೆ ಮಾತ್ರ ಹೋಟೆಲ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿಯನ್ನು ಕಾಣಲು ಹೋಟೆಲ್ ಎದುರು ಸಾರ್ವಜನಿಕರು ಕಾತುರದಿಂದ ಕಾಯುತ್ತಿದ್ದಾರೆ.</p>.<p><strong>* ಇವನ್ನೂ ಓದಿ...</strong></p>.<p><strong>* <a href="http://www.prajavani.net/news/article/2018/02/19/555042.html">ಪ್ರಧಾನಿ ಮೋದಿಗೆ ಮೈಸೂರಿನ ವಿಮಾನನಿಲ್ದಾಣದಲ್ಲಿ ಸಿಎಂ ಸ್ವಾಗತ</a><br /> * <a href="http://elections.prajavani.net/article/modi-mysore-shaw-coast-379">ಮೈಸೂರಿಗೆ ಮೋದಿ; ಕರಾವಳಿಗೆ ಶಾ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>