<p><strong>ಚಿತ್ರದುರ್ಗ: </strong>ತ್ರಿಪದಿಗಳ ಮೂಲಕ ಸಮಾಜಕ್ಕೆ ಸಂದೇಶ ಸಾರಿದ ಸರ್ವಜ್ಞನ ಜನ್ಮಸ್ಥಳ ಮತ್ತು ಸಮಾಧಿ ಸ್ಥಳವನ್ನು ಸರ್ಕಾರ ಅಭಿವೃದ್ಧಿಪಡಿಸಿ, ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಕುಂಬಾರ ಗುರುಪೀಠದ ಗುರುಬಸವ ಕುಂಬಾರ ತಿಪ್ಪೇಸ್ವಾಮಿ ಒತ್ತಾಯಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ತರಾಸು ರಂಗಮಂದಿರದಲ್ಲಿ ನಡೆದ ‘ಕವಿ ಸರ್ವಜ್ಞ ಜಯಂತಿ’ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>‘ಇತ್ತೀಚೆಗೆ ನಾವು ಹಾವೇರಿ ಜಿಲ್ಲೆ ಮಾಸೂರಿನಲ್ಲಿರುವ ಕವಿ ಸರ್ವಜ್ಞನ ಜನ್ಮಸ್ಥಳ ಮತ್ತು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದೆವು. ಅಲ್ಲಿನ ಪರಿಸ್ಥಿತಿ ಕಂಡು ಮನಸ್ಸಿಗೆ ತುಂಬಾ ನೋವಾಯಿತು. ರಾಜ್ಯದಲ್ಲಿ ಬಸವ ಗುರುಪೀಠ, ಕನಕ, ವಾಲ್ಮೀಕಿ ಗುರುಪೀಠ ಸೇರಿದಂತೆ ಹಲವು ದಾರ್ಶನಿಕರ ಗುರುಪೀಠಗಳಿಗೆ ಸರ್ಕಾರ ಅನುದಾನ ನೀಡಿ, ಅಭಿವೃದ್ಧಿಪಡಿಸಿದೆ. ಅದೇ ರೀತಿ ಈ ಸ್ಥಳವನ್ನು ಅಭಿವೃದ್ದಿಪಡಿಸಿ, ಸಂಶೋಧನಾ ಕೇಂದ್ರ ಸ್ಥಾಪಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ತ್ರಿಪದಿಗಳ ಮೂಲಕ ಸಮಾಜಕ್ಕೆ ಸಂದೇಶ ಸಾರಿದ ಸರ್ವಜ್ಞನ ಜನ್ಮಸ್ಥಳ ಮತ್ತು ಸಮಾಧಿ ಸ್ಥಳವನ್ನು ಸರ್ಕಾರ ಅಭಿವೃದ್ಧಿಪಡಿಸಿ, ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಕುಂಬಾರ ಗುರುಪೀಠದ ಗುರುಬಸವ ಕುಂಬಾರ ತಿಪ್ಪೇಸ್ವಾಮಿ ಒತ್ತಾಯಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ತರಾಸು ರಂಗಮಂದಿರದಲ್ಲಿ ನಡೆದ ‘ಕವಿ ಸರ್ವಜ್ಞ ಜಯಂತಿ’ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>‘ಇತ್ತೀಚೆಗೆ ನಾವು ಹಾವೇರಿ ಜಿಲ್ಲೆ ಮಾಸೂರಿನಲ್ಲಿರುವ ಕವಿ ಸರ್ವಜ್ಞನ ಜನ್ಮಸ್ಥಳ ಮತ್ತು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದೆವು. ಅಲ್ಲಿನ ಪರಿಸ್ಥಿತಿ ಕಂಡು ಮನಸ್ಸಿಗೆ ತುಂಬಾ ನೋವಾಯಿತು. ರಾಜ್ಯದಲ್ಲಿ ಬಸವ ಗುರುಪೀಠ, ಕನಕ, ವಾಲ್ಮೀಕಿ ಗುರುಪೀಠ ಸೇರಿದಂತೆ ಹಲವು ದಾರ್ಶನಿಕರ ಗುರುಪೀಠಗಳಿಗೆ ಸರ್ಕಾರ ಅನುದಾನ ನೀಡಿ, ಅಭಿವೃದ್ಧಿಪಡಿಸಿದೆ. ಅದೇ ರೀತಿ ಈ ಸ್ಥಳವನ್ನು ಅಭಿವೃದ್ದಿಪಡಿಸಿ, ಸಂಶೋಧನಾ ಕೇಂದ್ರ ಸ್ಥಾಪಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>