ಬಜೆಟ್ ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ಮುಕ್ಕಾಲು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ಬ್ರಾಹ್ಮಣ ಮತ್ತು ವೈಶ್ಯ ಸಮುದಾಯದವರಲ್ಲಿ ಸಾಕಷ್ಟು ಸಂಖ್ಯೆಯ ಬಡವರಿದ್ದಾರೆ. ಅವರಿಗೆ ಸ್ವಯಂ ಉದ್ಯೋಗ ಹಾಗೂ ಸಾಲದ ರೂಪದಲ್ಲಿ ಆರ್ಥಿಕ ನೆರವು ನೀಡಲು ನಿಗಮ ಸ್ಥಾಪಿಸಬೇಕು ಎಂದು ಕೋರಿದರು.