ದಾವಣಗೆರೆ: ಸಂಸತ್ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ನಿಂದ ನೀಡುವ ‘ಜಯದೇವಶ್ರೀ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.
ಬುಧವಾರ ಮಾಹಿತಿ ನೀಡಿದ ಅವರು, ಸಂಶೋಧಕ ಹಂಪ ನಾಗರಾಜಯ್ಯ ಅವರಿಗೆ ‘ಶೂನ್ಯಪೀಠಅಲ್ಲಮ’ ಪ್ರಶಸ್ತಿ, ಬಿಜೆಪಿ ನಾಯಕಿ ಪ್ರಮೀಳಾ ನೇಸರ್ಗಿ ಅವರಿಗೆ ‘ಶೂನ್ಯಪೀಠ ಅಕ್ಕನಾಗಮ್ಮ’ ಪ್ರಶಸ್ತಿ ಹಾಗೂ ಸಮಾಜ ಸೇವಕ ಡಾ.ಸಿ.ಆರ್.ನಸೀರ್ ಅಹಮದ್ ಅವರಿಗೆ ‘ಶೂನ್ಯಪೀಠ ಚನ್ನಬಸವ’ ಪ್ರಶಸ್ತಿ ನೀಡಲಾಗುವುದು ಎಂದರು.
ಪ್ರಶಸ್ತಿಯು ತಲಾ ₹25 ಸಾವಿರ ನಗದು, ಫಲಕ, ಸ್ಮರಣಿಕೆ ಒಳಗೊಂಡಿದೆ. ದಾವಣಗೆರೆಯಲ್ಲಿ ಮಾರ್ಚ್ 3ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.