<p><strong>ಬೆಂಗಳೂರು:</strong> ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನಲ್ಲಿ ಸಕ್ರಿಯರಾಗಿದ್ದ ಪ್ರಮುಖರಿಗೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರರಾವ್ ಭರವಸೆ ನೀಡಿದ್ದಾರೆ.</p>.<p>ವಿಧಾನಪರಿಷತ್ನ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪಗೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡುವುದು ಬೇಡ ಎಂದು ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪಗೆ ಕೆಲವರು ಮನವಿ ಮಾಡಿದ್ದರು. ಅವರಿಗೆ ಟಿಕೆಟ್ ನೀಡಿದಲ್ಲಿ ಠೇವಣಿ ಕೂಡ ಸಿಗುವುದಿಲ್ಲ ಎಂದೂ ಮನವಿಯಲ್ಲಿ ವಿವರಿಸಿದ್ದರು.</p>.<p>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಪತ್ರ ಬರೆದಿದ್ದ ಯುವ ಬ್ರಿಗೇಡ್ನ ಆನೇಕಲ್ ದೊಡ್ಡಯ್ಯ, ‘ಈಶ್ವರಪ್ಪಗೆ ಟಿಕೆಟ್ ನೀಡದೇ ಇದ್ದರೆ ಮತ್ತೆ ರಾಯಣ್ಣ ಬ್ರಿಗೇಡ್ ಚಟುವಟಿಕೆ ಆರಂಭಿಸಬೇಕಾಗುತ್ತದೆ. ಪಕ್ಷದ ಮೇಲೆ ಇದು ದುಷ್ಪರಿಣಾಮ ಬೀರಲಿದೆ’ ಎಂದು ಎಚ್ಚರಿಸಿದ್ದರು.</p>.<p>ಈ ಬೆಳವಣಿಗೆಗೆ ತಡೆಯೊಡ್ಡಲು ಮುಂದಾದ ರಾವ್, ಬ್ರಿಗೇಡ್ನ ರಾಜ್ಯ ಘಟಕದ ವಿರೂಪಾಕ್ಷಪ್ಪ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಮೂರ್ತಿ, ಕಾಶೀನಾಥ್ ಹುಡೇದ್ ಜತೆ ಮಾತುಕತೆ ನಡೆಸಿದರು. 21 ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಲೇಬೇಕು ಎಂದು ಬ್ರಿಗೇಡ್ ಪ್ರಮುಖರು ಈ ವೇಳೆ ಪಟ್ಟು ಹಿಡಿದರು.</p>.<p>‘ಕ್ಷೇತ್ರ ಸಮೀಕ್ಷೆ ನಡೆಸುವ ವೇಳೆ ಎಲ್ಲರ ಹೆಸರನ್ನೂ ಪರಿಗಣಿಸಲಾಗುವುದು. ಗೆಲ್ಲುವ ಅಭ್ಯರ್ಥಿ ಇದ್ದರೆ ಖಂಡಿತಾ ಟಿಕೆಟ್ ನೀಡುವುದಾಗಿ ರಾವ್ ಭರವಸೆ ನೀಡಿದರು’ ಎಂದು ಮೂಲಗಳು ಹೇಳಿವೆ.</p>.<p>ಬ್ರಿಗೇಡ್ ನೀಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈಶ್ವರಪ್ಪ (ಶಿವಮೊಗ್ಗ), ಮಾಜಿ ಸಂಸದ ವಿರೂಪಾಕ್ಷಪ್ಪ (ಸಿಂಧನೂರು), ವೆಂಕಟೇಶ್ ಮೂರ್ತಿ (ಪದ್ಮನಾಭ ನಗರ), ದೊಡ್ಡಯ್ಯ ಆನೇಕಲ್ (ಬೆಂಗಳೂರು ದಕ್ಷಿಣ) ಅವರ ಹೆಸರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನಲ್ಲಿ ಸಕ್ರಿಯರಾಗಿದ್ದ ಪ್ರಮುಖರಿಗೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರರಾವ್ ಭರವಸೆ ನೀಡಿದ್ದಾರೆ.</p>.<p>ವಿಧಾನಪರಿಷತ್ನ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪಗೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡುವುದು ಬೇಡ ಎಂದು ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪಗೆ ಕೆಲವರು ಮನವಿ ಮಾಡಿದ್ದರು. ಅವರಿಗೆ ಟಿಕೆಟ್ ನೀಡಿದಲ್ಲಿ ಠೇವಣಿ ಕೂಡ ಸಿಗುವುದಿಲ್ಲ ಎಂದೂ ಮನವಿಯಲ್ಲಿ ವಿವರಿಸಿದ್ದರು.</p>.<p>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಪತ್ರ ಬರೆದಿದ್ದ ಯುವ ಬ್ರಿಗೇಡ್ನ ಆನೇಕಲ್ ದೊಡ್ಡಯ್ಯ, ‘ಈಶ್ವರಪ್ಪಗೆ ಟಿಕೆಟ್ ನೀಡದೇ ಇದ್ದರೆ ಮತ್ತೆ ರಾಯಣ್ಣ ಬ್ರಿಗೇಡ್ ಚಟುವಟಿಕೆ ಆರಂಭಿಸಬೇಕಾಗುತ್ತದೆ. ಪಕ್ಷದ ಮೇಲೆ ಇದು ದುಷ್ಪರಿಣಾಮ ಬೀರಲಿದೆ’ ಎಂದು ಎಚ್ಚರಿಸಿದ್ದರು.</p>.<p>ಈ ಬೆಳವಣಿಗೆಗೆ ತಡೆಯೊಡ್ಡಲು ಮುಂದಾದ ರಾವ್, ಬ್ರಿಗೇಡ್ನ ರಾಜ್ಯ ಘಟಕದ ವಿರೂಪಾಕ್ಷಪ್ಪ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಮೂರ್ತಿ, ಕಾಶೀನಾಥ್ ಹುಡೇದ್ ಜತೆ ಮಾತುಕತೆ ನಡೆಸಿದರು. 21 ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಲೇಬೇಕು ಎಂದು ಬ್ರಿಗೇಡ್ ಪ್ರಮುಖರು ಈ ವೇಳೆ ಪಟ್ಟು ಹಿಡಿದರು.</p>.<p>‘ಕ್ಷೇತ್ರ ಸಮೀಕ್ಷೆ ನಡೆಸುವ ವೇಳೆ ಎಲ್ಲರ ಹೆಸರನ್ನೂ ಪರಿಗಣಿಸಲಾಗುವುದು. ಗೆಲ್ಲುವ ಅಭ್ಯರ್ಥಿ ಇದ್ದರೆ ಖಂಡಿತಾ ಟಿಕೆಟ್ ನೀಡುವುದಾಗಿ ರಾವ್ ಭರವಸೆ ನೀಡಿದರು’ ಎಂದು ಮೂಲಗಳು ಹೇಳಿವೆ.</p>.<p>ಬ್ರಿಗೇಡ್ ನೀಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈಶ್ವರಪ್ಪ (ಶಿವಮೊಗ್ಗ), ಮಾಜಿ ಸಂಸದ ವಿರೂಪಾಕ್ಷಪ್ಪ (ಸಿಂಧನೂರು), ವೆಂಕಟೇಶ್ ಮೂರ್ತಿ (ಪದ್ಮನಾಭ ನಗರ), ದೊಡ್ಡಯ್ಯ ಆನೇಕಲ್ (ಬೆಂಗಳೂರು ದಕ್ಷಿಣ) ಅವರ ಹೆಸರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>