ಚಿಕ್ಕಮಗಳೂರು, ಗದಗ–ಬೆಟಗೇರಿ, ಹೊಸಪೇಟೆ, ಶಿರಾ ನಗರಸಭೆಗಳು ಹಾಗೂ ಅಥಣಿ, ಅಣ್ಣಿಗೇರಿ ಮತ್ತು ಬಂಕಾಪುರ ಪುರಸಭೆಗಳ ಚುನಾಯಿತ ಸದಸ್ಯರ ಅಧಿಕಾರ ಅವಧಿ 2019ರ ಮಾರ್ಚ್ನಲ್ಲಿ ಅಂತ್ಯಗೊಂಡಿತ್ತು. ಉಳಿದ 51 ಸ್ಥಳೀಯ ಸಂಸ್ಥೆಗಳ ಸದಸ್ಯರ ಅವಧಿ ಈ ವರ್ಷದ ವಿವಿಧ ತಿಂಗಳಲ್ಲಿ ಮುಕ್ತಾಯಗೊಂಡಿತ್ತು. ಈ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೂ ಡಿಸೆಂಬರ್ 30ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು.