ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರಡಿ 5ನೇ ಹಣಕಾಸು ಆಯೋಗವನ್ನು ಸರ್ಕಾರ ರಚಿಸಿದ್ದು, ಇದರ ಅಧ್ಯಕ್ಷರನ್ನಾಗಿ ಮಾಜಿ ಸಂಸದ ಸಿ. ನಾರಾಯಣಸ್ವಾಮಿ ಅವರನ್ನು ನೇಮಿಸಲಾಗಿದೆ.
ಸದಸ್ಯರನ್ನಾಗಿ ಮೊಹಮದ್ ಸನಾವುಲ್ಲಾ ಮತ್ತು ಆರ್.ಎಸ್.ಪೋಂಡೆ ಅವರನ್ನು ನೇಮಿಸಲಾಗಿದೆ. ಈ ಆಯೋಗವು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಹಣಕಾಸಿನ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಸರ್ಕಾರಕ್ಕೆ ಶಿಫಾರಸುಗಳನ್ನು ನೀಡಲಿದೆ.