<p><strong>ಹಾಸನ:</strong> ಕೃಷ್ಣ ಬೈರೇಗೌಡರ ಕಾರ್ಯವೈಖರಿಯಿಂದ ಸರ್ಕಾರದ 6 ನೇ ಗ್ಯಾರಂಟಿಯಾದ ಭೂ ಗ್ಯಾರಂಟಿ ಇಂದು ಸಾಧ್ಯವಾಗಿದೆ. ನೂರಾರು ವರ್ಷಗಳಿಂದ ಬಾಕಿ ಇದ್ದ ಕೆಲಸಗಳಿಗೆ ಮುಕ್ತಿ ನೀಡಲಾಗಿದೆ. ಪ್ರಗತಿಯ ಹಾದಿಯಲ್ಲಿ ಹಾಸನ ಹೊರಟಿದೆ. ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. </p>.ಮತಕಳವು | ಪ್ರತಿ ಜಿಲ್ಲೆಯಿಂದ 300 ಜನ ದೆಹಲಿಗೆ: ಡಿ.ಕೆ. ಶಿವಕುಮಾರ್ .<p>ಮನುಷ್ಯ ಹುಟ್ಟುವಾಗ ಖಾಲಿ ಕೈಯಲ್ಲಿ ಬರುತ್ತೇವೆ. ಹೋಗುವಾಗ ಪಾಪ–ಪುಣ್ಯ ಬಿಟ್ಟು ಹೋಗುತ್ತೇವೆ. ಅದೇ ರೀತಿ ನಮ್ಮ ಸರ್ಕಾರವು ಸಾಕ್ಷಿಗುಡ್ಡೆಗಳನ್ನುನೀಡಲಿದೆ. ಕೊಟ್ಟ ಮಾತಿನಂತೆ ₹1 ಲಕ್ಷ ಕೋಟಿ ಅನ್ನು ಜನರ ಖಾತೆಗಳಿಗೆ ಕೊಡಲಾಗಿದೆ. ಇಂಧನ ಇಲಾಖೆಯಿಂದ ಪಂಪ್ಸೆಟ್ಗಳಿಗೆ ವರ್ಷಕ್ಕೆ ₹20 ಸಾವಿರ ಕೋಟಿ ಕೊಡಲಾಗುತ್ತಿದೆ ಎಂದರು. </p><p>ಎತ್ತಿನಹೊಳೆ ಯೋಜನೆಯ ನೀರನ್ನು ಹೊರಕ್ಕೆ ತರುವಲ್ಲಿ ಜಿಲ್ಲೆಯ ಅಧಿಕಾರಿಗಳ ಪಾತ್ರ ದೊಡ್ಡದು. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟ ನಾಲ್ಕೈದು ತಿಂಗಳಲ್ಲಿ ಎತ್ತಿನಹೊಳೆ ನೀರನ್ನು ಬರಪೀಡಿತ ಜಿಲ್ಲೆಗಳಿಗೆ ಹರಿಸುವ ಕೆಲಸ ಮಾಡಲಾಗುವುದು ಎಂದರು. </p>.ಸಂಸತ್ ಅಧಿವೇಶನದಲ್ಲಿ ಬ್ಯುಸಿ; ಹೈಕಮಾಂಡ್ ನಾಯಕರ ಭೇಟಿ ಇಲ್ಲ: ಡಿ.ಕೆ. ಶಿವಕುಮಾರ್.<p>ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ನಮಗೆ ದೊಡ್ಡ ಜಯ. ಮೇಕೆದಾಟು ಯೋಜನೆ ಕಾರ್ಯಗತವಾದರೆ, ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಅನುಕೂಲ ಆಗಲಿದೆ. ಮೇಕೆದಾಟಿನಲ್ಲಿ 400 ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು. ಈ ಯೋಜನೆಯನ್ನು ಯಾವ ರೀತಿ ಆರಂಭಿಸಬೇಕು ಎನ್ನುವುದರ ಬಗ್ಗೆ ಮುಖ್ಯಮಂತ್ರಿ ಜೊತೆ ಸೇರಿ ಕಾರ್ಯ ಮಾಡಲಾಗುವುದು ಎಂದು ಹೇಳಿದರು.</p><p>ನಮ್ಮದು ಅಭಿವೃದ್ಧಿ ಪರ ಸರ್ಕಾರ. ವಿಜಯಪುರದಲ್ಲಿ 1.11 ಲಕ್ಷ ಜನರಿಗೆ ಹಕ್ಕುಪತ್ರ ಕೊಡಲಾಗಿತ್ತು. ಅದೇ ಕೆಲಸವನ್ನು ಹಾಸನದಲ್ಲಿಯೂ ಮಾಡಲಾಗಿದೆ. 142 ಭರವಸೆಗಳನ್ನು ಈಡೇರಿಸಿದ್ದೇವೆ. ರಾಜ್ಯದ ಜನತೆಯ ಕಲ್ಯಾಣದ ಕೆಲಸ ಮುಂದುವರಿಯಲಿದೆ ಎಂದರು. </p>.ಕನಕಪುರ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥನೆ .<p>ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಆಶೀರ್ವಾದ ಮಾಡಿದ್ದೀರಿ. ನಿಮ್ಮ ಸೇವೆಗೆ ಸರ್ಕಾರ ಸದಾ ಸಿದ್ಧವಾಗಿದೆ. ಎಲ್ಲ ಇಲಾಖೆಗಳೂ ಹಾಸನದ ಅಭಿವೃದ್ಧಿಗೆ ಬದ್ಧವಾಗಿವೆ ಎಂದರು.</p><p>ಹಾಸನಾಂಬೆಯ ದರ್ಶನ ವ್ಯವಸ್ಥೆಗೆ ಕೃಷ್ಣ ಬೈರೇಗೌಡರು ಹೊಸ ರೂಪ ನೀಡಿದರು. ಹಾಸನಾಂಬೆಯ ದರ್ಶನ ಪಡೆದಿದ್ದು, ಅರಸೀಕೆರೆಯ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಗೆ ನಮಸ್ಕಾರ ಸಲ್ಲಿಸುತ್ತೇನೆ ಎಂದರು.</p>.ನಾನು ಗುಂಪುಗಾರಿಕೆ ಮಾಡಲ್ಲ, ಬೆನ್ನಿಗೆ ಚೂರಿ ಹಾಕಲ್ಲ: ಡಿ.ಕೆ. ಶಿವಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಕೃಷ್ಣ ಬೈರೇಗೌಡರ ಕಾರ್ಯವೈಖರಿಯಿಂದ ಸರ್ಕಾರದ 6 ನೇ ಗ್ಯಾರಂಟಿಯಾದ ಭೂ ಗ್ಯಾರಂಟಿ ಇಂದು ಸಾಧ್ಯವಾಗಿದೆ. ನೂರಾರು ವರ್ಷಗಳಿಂದ ಬಾಕಿ ಇದ್ದ ಕೆಲಸಗಳಿಗೆ ಮುಕ್ತಿ ನೀಡಲಾಗಿದೆ. ಪ್ರಗತಿಯ ಹಾದಿಯಲ್ಲಿ ಹಾಸನ ಹೊರಟಿದೆ. ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. </p>.ಮತಕಳವು | ಪ್ರತಿ ಜಿಲ್ಲೆಯಿಂದ 300 ಜನ ದೆಹಲಿಗೆ: ಡಿ.ಕೆ. ಶಿವಕುಮಾರ್ .<p>ಮನುಷ್ಯ ಹುಟ್ಟುವಾಗ ಖಾಲಿ ಕೈಯಲ್ಲಿ ಬರುತ್ತೇವೆ. ಹೋಗುವಾಗ ಪಾಪ–ಪುಣ್ಯ ಬಿಟ್ಟು ಹೋಗುತ್ತೇವೆ. ಅದೇ ರೀತಿ ನಮ್ಮ ಸರ್ಕಾರವು ಸಾಕ್ಷಿಗುಡ್ಡೆಗಳನ್ನುನೀಡಲಿದೆ. ಕೊಟ್ಟ ಮಾತಿನಂತೆ ₹1 ಲಕ್ಷ ಕೋಟಿ ಅನ್ನು ಜನರ ಖಾತೆಗಳಿಗೆ ಕೊಡಲಾಗಿದೆ. ಇಂಧನ ಇಲಾಖೆಯಿಂದ ಪಂಪ್ಸೆಟ್ಗಳಿಗೆ ವರ್ಷಕ್ಕೆ ₹20 ಸಾವಿರ ಕೋಟಿ ಕೊಡಲಾಗುತ್ತಿದೆ ಎಂದರು. </p><p>ಎತ್ತಿನಹೊಳೆ ಯೋಜನೆಯ ನೀರನ್ನು ಹೊರಕ್ಕೆ ತರುವಲ್ಲಿ ಜಿಲ್ಲೆಯ ಅಧಿಕಾರಿಗಳ ಪಾತ್ರ ದೊಡ್ಡದು. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟ ನಾಲ್ಕೈದು ತಿಂಗಳಲ್ಲಿ ಎತ್ತಿನಹೊಳೆ ನೀರನ್ನು ಬರಪೀಡಿತ ಜಿಲ್ಲೆಗಳಿಗೆ ಹರಿಸುವ ಕೆಲಸ ಮಾಡಲಾಗುವುದು ಎಂದರು. </p>.ಸಂಸತ್ ಅಧಿವೇಶನದಲ್ಲಿ ಬ್ಯುಸಿ; ಹೈಕಮಾಂಡ್ ನಾಯಕರ ಭೇಟಿ ಇಲ್ಲ: ಡಿ.ಕೆ. ಶಿವಕುಮಾರ್.<p>ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ನಮಗೆ ದೊಡ್ಡ ಜಯ. ಮೇಕೆದಾಟು ಯೋಜನೆ ಕಾರ್ಯಗತವಾದರೆ, ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಅನುಕೂಲ ಆಗಲಿದೆ. ಮೇಕೆದಾಟಿನಲ್ಲಿ 400 ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು. ಈ ಯೋಜನೆಯನ್ನು ಯಾವ ರೀತಿ ಆರಂಭಿಸಬೇಕು ಎನ್ನುವುದರ ಬಗ್ಗೆ ಮುಖ್ಯಮಂತ್ರಿ ಜೊತೆ ಸೇರಿ ಕಾರ್ಯ ಮಾಡಲಾಗುವುದು ಎಂದು ಹೇಳಿದರು.</p><p>ನಮ್ಮದು ಅಭಿವೃದ್ಧಿ ಪರ ಸರ್ಕಾರ. ವಿಜಯಪುರದಲ್ಲಿ 1.11 ಲಕ್ಷ ಜನರಿಗೆ ಹಕ್ಕುಪತ್ರ ಕೊಡಲಾಗಿತ್ತು. ಅದೇ ಕೆಲಸವನ್ನು ಹಾಸನದಲ್ಲಿಯೂ ಮಾಡಲಾಗಿದೆ. 142 ಭರವಸೆಗಳನ್ನು ಈಡೇರಿಸಿದ್ದೇವೆ. ರಾಜ್ಯದ ಜನತೆಯ ಕಲ್ಯಾಣದ ಕೆಲಸ ಮುಂದುವರಿಯಲಿದೆ ಎಂದರು. </p>.ಕನಕಪುರ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥನೆ .<p>ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಆಶೀರ್ವಾದ ಮಾಡಿದ್ದೀರಿ. ನಿಮ್ಮ ಸೇವೆಗೆ ಸರ್ಕಾರ ಸದಾ ಸಿದ್ಧವಾಗಿದೆ. ಎಲ್ಲ ಇಲಾಖೆಗಳೂ ಹಾಸನದ ಅಭಿವೃದ್ಧಿಗೆ ಬದ್ಧವಾಗಿವೆ ಎಂದರು.</p><p>ಹಾಸನಾಂಬೆಯ ದರ್ಶನ ವ್ಯವಸ್ಥೆಗೆ ಕೃಷ್ಣ ಬೈರೇಗೌಡರು ಹೊಸ ರೂಪ ನೀಡಿದರು. ಹಾಸನಾಂಬೆಯ ದರ್ಶನ ಪಡೆದಿದ್ದು, ಅರಸೀಕೆರೆಯ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಗೆ ನಮಸ್ಕಾರ ಸಲ್ಲಿಸುತ್ತೇನೆ ಎಂದರು.</p>.ನಾನು ಗುಂಪುಗಾರಿಕೆ ಮಾಡಲ್ಲ, ಬೆನ್ನಿಗೆ ಚೂರಿ ಹಾಕಲ್ಲ: ಡಿ.ಕೆ. ಶಿವಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>