<p><strong>ಬೆಂಗಳೂರು:</strong> ಪ್ರತ್ಯೇಕ ಪ್ರಕರಣಗಳಲ್ಲಿ ಬುಧವಾರ 4ನೇ ತರಗತಿ ವಿದ್ಯಾರ್ಥಿ ಸೇರಿ ಏಳು ಮಂದಿ ಹಠಾತ್ಸಾವಿಗೀಡಾಗಿದ್ದಾರೆ. ಹೃದಯಾಘಾತ ಕಾರಣ ಎನ್ನಲಾಗಿದೆ.</p><p><strong>ರಾಮನಗರ ವರದಿ:</strong> ಹೃದಯಾಘಾತದಿಂದ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕನಕಪುರ ತಾಲ್ಲೂಕಿನ ಸಂಗಮ ವನ್ಯಜೀವಿ ವಲಯದ ಸ್ಥಳೀಯ ಪರಿಸರ ಅಭಿವೃದ್ಧಿ ಸಮಿತಿ ನೌಕರ ಮಾದೇಶ ನಾಯಕ (38) ಮತ್ತು ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಗೊಲ್ಲರದೊಡ್ಡಿಯ ಕೂಲಿ ಕಾರ್ಮಿಕ ಗಿರೀಶ್ (25) ಮೃತರು.</p><p><strong>ಮೂವರ ಸಾವು (ದಾವಣಗೆರೆ ವರದಿ):</strong> ಜಿಲ್ಲೆಯಲ್ಲಿ ಎರಡು ದಿನಗಳ ಅವಧಿಯಲ್ಲಿ ಹೃದಯಸಂಬಂಧಿ ಕಾಯಿಲೆಗಳಿಂದ ಮೂವರುಮೃತಪಟ್ಟಿದ್ದಾರೆ. ದಾವಣಗೆರೆಯ ಜಯನಗರದ ಅಕ್ಷಯ್ (22), ಚಿಕ್ಕನಹಳ್ಳಿಯ ಹರೀಶ್ (54) ಹಾಗೂ ತಾಲ್ಲೂಕಿನ ನಾಗರಕಟ್ಟೆ ಗ್ರಾಮದ ಮಂಜ್ಯಾ ನಾಯ್ಕ (38) ಮೃತರು.</p><p>ಬುಧವಾರ ಬೆಳಿಗ್ಗೆ ಮನೆಯಲ್ಲಿ ಅಕ್ಷಯ್ ಏಕಾಏಕಿ ಕುಸಿದು ಬಿದ್ದಿದ್ದರೆ. ಹರೀಶ್ ಅವರಿಗೆ ನಸುಕಿನಲ್ಲಿ ಎದೆನೋವು ಕಾಣಿಸಿಕೊಂಡಿತ್ತು ಎಂದು ಮೂಲಗಳು ತಿಳಿಸಿವೆ.</p><p>ನಾಗರಕಟ್ಟೆಯ ಮಂಜ್ಯಾ ನಾಯ್ಕ ಅವರು ಮಂಗಳವಾರ ಗ್ರಾಮದ ಬಳಿ ಆಟೊ ಚಾಲನೆ ಮಾಡುವಾಗಲೇ ಹೃದಯಾಘಾತ ಸಂಭವಿಸಿಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ಮಾಧ್ಯಮಗಳಿಗೆ</p><p>ಮಾಹಿತಿ ನೀಡಿದ್ದಾರೆ.</p>.<h2>ಕುಸಿದುಬಿದ್ದು ಯುವತಿ ಸಾವು</h2><p><strong>ಧಾರವಾಡ:</strong> ಮನೆಯಲ್ಲಿ ಕುಸಿದುಬಿದ್ದಿದ್ದ ಸ್ಥಳೀಯ ನಿವಾಸಿ ಜೀವಿತಾ ಕುಸುಗೂರ (26) ಎಂಬವರು ಆಸ್ಪತ್ರೆಗೆ ಒಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.</p><p>‘ಜ್ವರ, ನೆಗಡಿಯಿಂದ ಬಳಲುತ್ತಿದ್ದ ಜೀವಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ಕುಸಿದುಬಿದ್ದರು. ಮರಣೋತ್ತರ ಪರೀಕ್ಷೆ ವರದಿ ಬಳಿಕಷ್ಟೇ ಸಾವಿಗೆ ಕಾರಣ ಗೊತ್ತಾಗಲಿದೆ’ ಎಂದು ಡಿಎಚ್ಒ ಡಾ.ಎಸ್.ಎಂ.ಹೊನಕೇರಿ ತಿಳಿಸಿದರು.</p><p>ಕೃಷಿವಿಜ್ಞಾನ ಸ್ನಾತಕೋತ್ತರ ಪದವೀಧರೆಯಾಗಿದ್ದರು. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು.</p>.<h2>4ನೇ ತರಗತಿ ಬಾಲಕ ಸಾವು</h2><p><strong>ಗುಂಡ್ಲುಪೇಟೆ (ಚಾಮರಾಜನಗರ):</strong> ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಮನೋಜ್ ಕುಮಾರ್ (10) ಮೃತಪಟ್ಟಿದ್ದಾನೆ.</p><p>ಈತ ದೊಡ್ಡಹುಂಡಿ ಗ್ರಾಮದ ದಿ.ನಾಗರಾಜು– ನಾಗರತ್ನಾ ದಂಪತಿ ಪುತ್ರ.</p><p>ತರಗತಿಯಲ್ಲಿ ಬುಧವಾರ ಶಾಲೆಯಲ್ಲಿ ಪಾಠ ಕೇಳುವಾಗ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಒಯ್ಯುವ ಮಾರ್ಗದಲ್ಲಿ ಮೃತಪಟ್ಟನು. ಹೃದಯ ಸಂಬಂಧಿ ಕಾಯಿಲೆ ಇತ್ತು. ಮೈಸೂರಿನ ಜಯದೇವ, ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರತ್ಯೇಕ ಪ್ರಕರಣಗಳಲ್ಲಿ ಬುಧವಾರ 4ನೇ ತರಗತಿ ವಿದ್ಯಾರ್ಥಿ ಸೇರಿ ಏಳು ಮಂದಿ ಹಠಾತ್ಸಾವಿಗೀಡಾಗಿದ್ದಾರೆ. ಹೃದಯಾಘಾತ ಕಾರಣ ಎನ್ನಲಾಗಿದೆ.</p><p><strong>ರಾಮನಗರ ವರದಿ:</strong> ಹೃದಯಾಘಾತದಿಂದ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕನಕಪುರ ತಾಲ್ಲೂಕಿನ ಸಂಗಮ ವನ್ಯಜೀವಿ ವಲಯದ ಸ್ಥಳೀಯ ಪರಿಸರ ಅಭಿವೃದ್ಧಿ ಸಮಿತಿ ನೌಕರ ಮಾದೇಶ ನಾಯಕ (38) ಮತ್ತು ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಗೊಲ್ಲರದೊಡ್ಡಿಯ ಕೂಲಿ ಕಾರ್ಮಿಕ ಗಿರೀಶ್ (25) ಮೃತರು.</p><p><strong>ಮೂವರ ಸಾವು (ದಾವಣಗೆರೆ ವರದಿ):</strong> ಜಿಲ್ಲೆಯಲ್ಲಿ ಎರಡು ದಿನಗಳ ಅವಧಿಯಲ್ಲಿ ಹೃದಯಸಂಬಂಧಿ ಕಾಯಿಲೆಗಳಿಂದ ಮೂವರುಮೃತಪಟ್ಟಿದ್ದಾರೆ. ದಾವಣಗೆರೆಯ ಜಯನಗರದ ಅಕ್ಷಯ್ (22), ಚಿಕ್ಕನಹಳ್ಳಿಯ ಹರೀಶ್ (54) ಹಾಗೂ ತಾಲ್ಲೂಕಿನ ನಾಗರಕಟ್ಟೆ ಗ್ರಾಮದ ಮಂಜ್ಯಾ ನಾಯ್ಕ (38) ಮೃತರು.</p><p>ಬುಧವಾರ ಬೆಳಿಗ್ಗೆ ಮನೆಯಲ್ಲಿ ಅಕ್ಷಯ್ ಏಕಾಏಕಿ ಕುಸಿದು ಬಿದ್ದಿದ್ದರೆ. ಹರೀಶ್ ಅವರಿಗೆ ನಸುಕಿನಲ್ಲಿ ಎದೆನೋವು ಕಾಣಿಸಿಕೊಂಡಿತ್ತು ಎಂದು ಮೂಲಗಳು ತಿಳಿಸಿವೆ.</p><p>ನಾಗರಕಟ್ಟೆಯ ಮಂಜ್ಯಾ ನಾಯ್ಕ ಅವರು ಮಂಗಳವಾರ ಗ್ರಾಮದ ಬಳಿ ಆಟೊ ಚಾಲನೆ ಮಾಡುವಾಗಲೇ ಹೃದಯಾಘಾತ ಸಂಭವಿಸಿಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ಮಾಧ್ಯಮಗಳಿಗೆ</p><p>ಮಾಹಿತಿ ನೀಡಿದ್ದಾರೆ.</p>.<h2>ಕುಸಿದುಬಿದ್ದು ಯುವತಿ ಸಾವು</h2><p><strong>ಧಾರವಾಡ:</strong> ಮನೆಯಲ್ಲಿ ಕುಸಿದುಬಿದ್ದಿದ್ದ ಸ್ಥಳೀಯ ನಿವಾಸಿ ಜೀವಿತಾ ಕುಸುಗೂರ (26) ಎಂಬವರು ಆಸ್ಪತ್ರೆಗೆ ಒಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.</p><p>‘ಜ್ವರ, ನೆಗಡಿಯಿಂದ ಬಳಲುತ್ತಿದ್ದ ಜೀವಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ಕುಸಿದುಬಿದ್ದರು. ಮರಣೋತ್ತರ ಪರೀಕ್ಷೆ ವರದಿ ಬಳಿಕಷ್ಟೇ ಸಾವಿಗೆ ಕಾರಣ ಗೊತ್ತಾಗಲಿದೆ’ ಎಂದು ಡಿಎಚ್ಒ ಡಾ.ಎಸ್.ಎಂ.ಹೊನಕೇರಿ ತಿಳಿಸಿದರು.</p><p>ಕೃಷಿವಿಜ್ಞಾನ ಸ್ನಾತಕೋತ್ತರ ಪದವೀಧರೆಯಾಗಿದ್ದರು. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು.</p>.<h2>4ನೇ ತರಗತಿ ಬಾಲಕ ಸಾವು</h2><p><strong>ಗುಂಡ್ಲುಪೇಟೆ (ಚಾಮರಾಜನಗರ):</strong> ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಮನೋಜ್ ಕುಮಾರ್ (10) ಮೃತಪಟ್ಟಿದ್ದಾನೆ.</p><p>ಈತ ದೊಡ್ಡಹುಂಡಿ ಗ್ರಾಮದ ದಿ.ನಾಗರಾಜು– ನಾಗರತ್ನಾ ದಂಪತಿ ಪುತ್ರ.</p><p>ತರಗತಿಯಲ್ಲಿ ಬುಧವಾರ ಶಾಲೆಯಲ್ಲಿ ಪಾಠ ಕೇಳುವಾಗ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಒಯ್ಯುವ ಮಾರ್ಗದಲ್ಲಿ ಮೃತಪಟ್ಟನು. ಹೃದಯ ಸಂಬಂಧಿ ಕಾಯಿಲೆ ಇತ್ತು. ಮೈಸೂರಿನ ಜಯದೇವ, ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>