<p><strong>ಬೆಂಗಳೂರು:</strong> ಬೆಳ್ಳಂದೂರು ಕೆರೆಯ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚುವರಿಯಾಗಿ ಅಗತ್ಯ ಇರುವ ₹ 79.67 ಕೋಟಿಯ ಪೈಕಿ ಶೇಕಡ 25ರಷ್ಟು ಮೊತ್ತವನ್ನು ಬಿಡಿಎ ಕೆರೆ ಪುನಶ್ಚೇತನ ಶುಲ್ಕ ಒಳಗೊಂಡಂತೆ ಇತರ ಸ್ವಂತ ಆರ್ಥಿಕ ಸಂಪನ್ಮೂಲಗಳಿಂದ ಭರಿಸಲು ಸೂಚಿಸಿ, ಶೇ 75ರಷ್ಟು ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>‘ಬೆಳ್ಳಂದೂರು ಕೆರೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿ ಹಣ ಅಗತ್ಯ ಇದ್ದರೆ ಪ್ರತ್ಯೇಕವಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಸೂಚಿಸಿತ್ತು. ಬೆಳ್ಳಂದೂರು ಕೆರೆಯ ಪುನಶ್ಚೇತನ ಮತ್ತು ಅಭಿವೃದ್ಧಿ ಕಾಮಗಾರಿಗೆ ₹ 79.67 ಕೋಟಿ ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ನಗರಾಭಿವೃದ್ಧಿ ಇಲಾಖೆಯು ಪ್ರಸ್ತಾವ ಸಲ್ಲಿಸಿತ್ತು’ ಎಂದು ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.</p>.<p>‘ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂಎಲ್ಡಿ ನೀರಿನಿಂದ 259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ, ಲಿಫ್ಟ್-4 ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ 41 ಕೆರೆಗಳಿಗೆ ನೀರು ತುಂಬಿಸುವ ₹ 280 ಕೋಟಿ (ವಿಶ್ವಬ್ಯಾಂಕ್ ಠೇವಣಿ ಕೊಡುಗೆ ₹ 250 ಕೋಟಿ, ರಾಜ್ಯ ಸರ್ಕಾರದ ₹ 30 ಕೋಟಿ) ಅಂದಾಜು ಮೊತ್ತದ ಯೋಜನೆಗೂ ಸಭೆ ಅನುಮೋದನೆ ನೀಡಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಳ್ಳಂದೂರು ಕೆರೆಯ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚುವರಿಯಾಗಿ ಅಗತ್ಯ ಇರುವ ₹ 79.67 ಕೋಟಿಯ ಪೈಕಿ ಶೇಕಡ 25ರಷ್ಟು ಮೊತ್ತವನ್ನು ಬಿಡಿಎ ಕೆರೆ ಪುನಶ್ಚೇತನ ಶುಲ್ಕ ಒಳಗೊಂಡಂತೆ ಇತರ ಸ್ವಂತ ಆರ್ಥಿಕ ಸಂಪನ್ಮೂಲಗಳಿಂದ ಭರಿಸಲು ಸೂಚಿಸಿ, ಶೇ 75ರಷ್ಟು ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>‘ಬೆಳ್ಳಂದೂರು ಕೆರೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿ ಹಣ ಅಗತ್ಯ ಇದ್ದರೆ ಪ್ರತ್ಯೇಕವಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಸೂಚಿಸಿತ್ತು. ಬೆಳ್ಳಂದೂರು ಕೆರೆಯ ಪುನಶ್ಚೇತನ ಮತ್ತು ಅಭಿವೃದ್ಧಿ ಕಾಮಗಾರಿಗೆ ₹ 79.67 ಕೋಟಿ ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ನಗರಾಭಿವೃದ್ಧಿ ಇಲಾಖೆಯು ಪ್ರಸ್ತಾವ ಸಲ್ಲಿಸಿತ್ತು’ ಎಂದು ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.</p>.<p>‘ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂಎಲ್ಡಿ ನೀರಿನಿಂದ 259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ, ಲಿಫ್ಟ್-4 ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ 41 ಕೆರೆಗಳಿಗೆ ನೀರು ತುಂಬಿಸುವ ₹ 280 ಕೋಟಿ (ವಿಶ್ವಬ್ಯಾಂಕ್ ಠೇವಣಿ ಕೊಡುಗೆ ₹ 250 ಕೋಟಿ, ರಾಜ್ಯ ಸರ್ಕಾರದ ₹ 30 ಕೋಟಿ) ಅಂದಾಜು ಮೊತ್ತದ ಯೋಜನೆಗೂ ಸಭೆ ಅನುಮೋದನೆ ನೀಡಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>