‘ಡಿಎಂಕೆ ಸಂಸದರು, ತಮಿಳುನಾಡು ನಾಯಕರ ಜತೆ ಚರ್ಚಿಸಿದೆ. ಅವರು ನನ್ನ ಸಲಹೆಗಳನ್ನು ಸ್ವೀಕರಿಸಿದರು. ಎರಡೂ ಸರ್ಕಾರಗಳು ಮುಕ್ತವಾಗಿ ಚರ್ಚಿಸಿದರೆ ಪರಿಹಾರ ದೊರೆಯುತ್ತದೆ ಎಂಬ ನಿಲುವನ್ನು ಅವರೆಲ್ಲರೂ ಹೊಂದಿದ್ದಾರೆ. ಹಾಗಾಗಿ, ಕರ್ನಾಟಕ, ತಮಿಳುನಾಡು ಮುಖ್ಯಮಂತ್ರಿಗಳು ಮಾತುಕತೆ ನಡೆಸಬೇಕು. ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಬೇಕು’ ಎಂದರು.