ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ಸಂಘ ರಾಜಕೀಯ ಪಕ್ಷದ ಆಶ್ರಯದಲ್ಲಿ ಇಲ್ಲ: ಎ.ಪಿ.ರಂಗನಾಥ್

Last Updated 1 ಅಕ್ಟೋಬರ್ 2018, 16:44 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು ವಕೀಲರ ಸಂಘ ರಾಜಕೀಯ ಪಕ್ಷದ ಆಶ್ರಯದಲ್ಲಿ ಇಲ್ಲ’ ಎಂದು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ ಹಾಗೂ ಖಜಾಂಚಿ ಶಿವಮೂರ್ತಿ ಸ್ಪಷ್ಟಪಡಿಸಿದ್ದಾರೆ.

‘ಪ್ರಜಾವಾಣಿ’ ವೆಬ್‌ ಆವೃತ್ತಿಯಲ್ಲಿ ಸೆ.30ರಂದು ಪ್ರಕಟವಾಗಿರುವ, ‘ವಕೀಲರ ಸಂಘದಲ್ಲಿ ರಾಜಕೀಯ ನೆರಳು’ ಸುದ್ದಿಗೆ ಪ್ರತಿಕ್ರಿಯಿಸಿರುವ ಅವರು, ಸಂಘವು ತನ್ನದೇ ಆದ ಸ್ವಚ್ಛ, ಸಾರ್ವಭೌಮತ್ವ ಕಾಪಾಡಿಕೊಂಡು ಬಂದಿದೆ’ ಎಂದು ತಿಳಿಸಿದ್ದಾರೆ.

‘ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಹಾಗೂ ಪ್ರತಿಷ್ಠಿತ ಸಂಘವಿದು. ಹಲವು ದಶಕಗಳಿಂದ ರಾಜಕೀಯ ಪಕ್ಷಗಳನ್ನು ಹಾಗೂ ಆಡಳಿತಾರೂಢ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸುತ್ತಾ ಬಂದಿದೆ. ಸಾರ್ವಜನಿಕ ಹಿತ ಕಾಪಾಡುವಲ್ಲಿ ಸದಾ ಮುಂಚೂಣಿಯಲ್ಲಿದೆ’ ಎಂದು ಮೂವರೂ ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT