ಅಂಚೆ ಇಲಾಖೆಯ ಪ್ಯಾಕರ್ ಗೋವಿಂದ್ರಾಜ್ ಎಂಬುವವರು ತಪ್ಪೆಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಅವರನ್ನು ಅಮಾನತು ಮಾಡುವಂತೆ ತನಿಖಾಧಿಕಾರಿಗಳು ವರದಿ ನೀಡಿದ್ದಾರೆ. ಗೋವಿಂದರಾಜ್ ರಜೆಯ ಮೇಲೆ ತೆರಳಿದ್ದು, ಕೆಲಸಕ್ಕೆ ಹಾಜರಾದ ಕೂಡಲೇ ಅಮಾನತು ಆದೇಶ ಜಾರಿ ಮಾಡಲಾಗುವುದು ಎಂದು ಹೆಚ್ಚುವರಿ ಅಂಚೆ ಅಧೀಕ್ಷಕ ನವೀನ್ ಚಂದರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.