<p><strong>ಬೆಂಗಳೂರು: </strong>‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಎಎಪಿಯು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣಾ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ’ ಎಂದು ಎಎಪಿ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು ಪಾಲಿಕೆಗೆ ಚುನಾವಣೆ ನಡೆಸದೆ ಐದು ವರ್ಷಗಳಾಗಿವೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ನ ಶಾಸಕರಿಗೆ ಈ ಬಗ್ಗೆ ಕಾಳಜಿಯೇ ಇಲ್ಲ. ಜಾಗತಿಕ ಮಟ್ಟದಲ್ಲಿ ‘ಸಿಲಿಕಾನ್ ವ್ಯಾಲಿ’ ಎಂದು ಹೆಸರಾಗಿದ್ದ ಬೆಂಗಳೂರು ಈಗ, ‘ಗಾರ್ಬೇಜ್ ಸಿಟಿ’ ಎಂದಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಜನ ಪ್ರತಿನಿಧಿಗಳು ಇಲ್ಲದೆ, ಶಾಸಕರು ಮತ್ತು ಅಧಿಕಾರಿಗಳೇ ಆಡಳಿತ ನಡೆಸುತ್ತಿರುವುದರಿಂದ ಹೀಗಾಗಿದೆ’ ಎಂದರು.</p>.<p>ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ‘ನಗರದ ನಾಗರಿಕರೆಲ್ಲರೂ ಒಂದಾಗಿ ಪ್ರಾಮಾಣಿಕ ರಾಜಕಾರಣಿಗಳನ್ನು ಜಿಬಿಎಗೆ ಆರಿಸಬೇಕಿದೆ. ಮೂಲಸೌಕರ್ಯ ಅಭಿವೃದ್ಧಿಯ ಜತೆಗೆ ಉತ್ತಮ ಶಿಕ್ಷಣ, ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತದೆ’ ಎಂದರು.</p>.<p>ಪಕ್ಷದ ಕಾರ್ಯದರ್ಶಿ ಸೀತಾರಾಮ್ ಗುಂಡಪ್ಪ, ‘ಈಗಾಗಲೇ ವಾರ್ಡ್ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲಾಗಿದೆ. ಜನಸೇವೆಯ ಬಗ್ಗೆ ಪ್ರಾಮಾಣಿಕರಾಗಿರುವವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಎಎಪಿಯು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣಾ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ’ ಎಂದು ಎಎಪಿ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು ಪಾಲಿಕೆಗೆ ಚುನಾವಣೆ ನಡೆಸದೆ ಐದು ವರ್ಷಗಳಾಗಿವೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ನ ಶಾಸಕರಿಗೆ ಈ ಬಗ್ಗೆ ಕಾಳಜಿಯೇ ಇಲ್ಲ. ಜಾಗತಿಕ ಮಟ್ಟದಲ್ಲಿ ‘ಸಿಲಿಕಾನ್ ವ್ಯಾಲಿ’ ಎಂದು ಹೆಸರಾಗಿದ್ದ ಬೆಂಗಳೂರು ಈಗ, ‘ಗಾರ್ಬೇಜ್ ಸಿಟಿ’ ಎಂದಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಜನ ಪ್ರತಿನಿಧಿಗಳು ಇಲ್ಲದೆ, ಶಾಸಕರು ಮತ್ತು ಅಧಿಕಾರಿಗಳೇ ಆಡಳಿತ ನಡೆಸುತ್ತಿರುವುದರಿಂದ ಹೀಗಾಗಿದೆ’ ಎಂದರು.</p>.<p>ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ‘ನಗರದ ನಾಗರಿಕರೆಲ್ಲರೂ ಒಂದಾಗಿ ಪ್ರಾಮಾಣಿಕ ರಾಜಕಾರಣಿಗಳನ್ನು ಜಿಬಿಎಗೆ ಆರಿಸಬೇಕಿದೆ. ಮೂಲಸೌಕರ್ಯ ಅಭಿವೃದ್ಧಿಯ ಜತೆಗೆ ಉತ್ತಮ ಶಿಕ್ಷಣ, ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತದೆ’ ಎಂದರು.</p>.<p>ಪಕ್ಷದ ಕಾರ್ಯದರ್ಶಿ ಸೀತಾರಾಮ್ ಗುಂಡಪ್ಪ, ‘ಈಗಾಗಲೇ ವಾರ್ಡ್ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲಾಗಿದೆ. ಜನಸೇವೆಯ ಬಗ್ಗೆ ಪ್ರಾಮಾಣಿಕರಾಗಿರುವವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>