<p><strong>ಬೆಳಗಾವಿ</strong>: ವಿಜಯಪುರದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾದರು.</p>.<p>‘ಅನಾರೋಗ್ಯದಿಂದಾಗಿ ಅವರು ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಇಲ್ಲಿನ ಕೆಎಲ್ಇ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಲಿಂಗೈಕ್ಯರಾದರು’ ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ.</p>.<p>ಶ್ರೀಗಳ ಸಮಾಧಿಕ್ರಿಯೆ ಶನಿವಾರ (ಆ.8) ಮಧ್ಯಾಹ್ನ 3ಕ್ಕೆ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಳಿಯ ಶಾಂತಾಶ್ರಮದ ಆವರಣದಲ್ಲಿ ನೆರವೇರಲಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಸಂತಾಪ: ಶ್ರೀಗಳ ನಿಧನಕ್ಕೆ ಇಂಚಲದ ಸಾಧು ಸಂಸ್ಥಾನಮಠದಶಿವಾನಂದ ಭಾರತಿ ಸ್ವಾಮೀಜಿ, ಬೀದರ್ನ ಶಿವಕುಮಾರ ಸ್ವಾಮೀಜಿ, ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಂತಾಪ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ವಿಜಯಪುರದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾದರು.</p>.<p>‘ಅನಾರೋಗ್ಯದಿಂದಾಗಿ ಅವರು ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಇಲ್ಲಿನ ಕೆಎಲ್ಇ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಲಿಂಗೈಕ್ಯರಾದರು’ ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ.</p>.<p>ಶ್ರೀಗಳ ಸಮಾಧಿಕ್ರಿಯೆ ಶನಿವಾರ (ಆ.8) ಮಧ್ಯಾಹ್ನ 3ಕ್ಕೆ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಳಿಯ ಶಾಂತಾಶ್ರಮದ ಆವರಣದಲ್ಲಿ ನೆರವೇರಲಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಸಂತಾಪ: ಶ್ರೀಗಳ ನಿಧನಕ್ಕೆ ಇಂಚಲದ ಸಾಧು ಸಂಸ್ಥಾನಮಠದಶಿವಾನಂದ ಭಾರತಿ ಸ್ವಾಮೀಜಿ, ಬೀದರ್ನ ಶಿವಕುಮಾರ ಸ್ವಾಮೀಜಿ, ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಂತಾಪ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>