<p><strong>ಬೆಂಗಳೂರು</strong>: ರಾಜ್ಯದಲ್ಲಿನ ಅಬಕಾರಿ ಸನ್ನದುಗಳನ್ನು ಇ-ಹರಾಜು ಮಾಡುವ ಉದ್ದೇಶದಿಂದ ಹೊರಡಿಸಲಾಗಿದ್ದ, ಕರ್ನಾಟಕ ಅಬಕಾರಿ (ಭಾರತೀಯ ಹಾಗೂ ವಿದೇಶಿ ಮದ್ಯ ಮಾರಾಟ) ಎರಡನೇ ತಿದ್ದುಪಡಿ ನಿಯಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ಈ ಸಂಬಂಧ, ‘ಕರ್ನಾಟಕ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್’ ಅಧ್ಯಕ್ಷ ಎಸ್.ಗುರುಸ್ವಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ ಹೆಗ್ಡೆ ಸೇರಿದಂತೆ ಐವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p>.<p>ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಡಿ.ಆರ್.ರವಿಶಂಕರ್ ಮಂಡಿಸಿದ, ‘ಸರ್ಕಾರದ ಆದೇಶವು, ಕಾನೂನು ಬಾಹಿರ, ಏಕಪಕ್ಷೀಯವಾದ ಸಕಾರಣವಿಲ್ಲದ ಮತ್ತು ಸಂವಿಧಾನದ ವಿಧಿಗಳಿಗೆ ವಿರುದ್ಧವಾಗಿದೆ’ ಎಂಬ ವಾದಾಂಶವನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಮುಂದಿನ ಆದೇಶದವರೆಗೆ 2025ರ ನಿಯಮ 5 ಮತ್ತು ನಿಯಮ 5ಎ ಅನುಷ್ಠಾನಕ್ಕೆ ಮಧ್ಯಂತರ ತಡೆ ನೀಡಿದೆ.</p>.<p>‘ಪ್ರತಿವಾದಿ ರಾಜ್ಯ ಸರ್ಕಾರ ಮಧ್ಯಂತರ ಆದೇಶದ ಮಾರ್ಪಾಡು ಅಥವಾ ತೆರವಿಗೆ ಅರ್ಜಿ ಸಲ್ಲಿಸಲು ಸ್ವತಂತ್ರವಿದೆ’ ಎಂದು ಸ್ಪಷ್ಟಪಡಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಿದೆ.</p>.<p>‘ಕರ್ನಾಟಕ ಅಬಕಾರಿ (ಭಾರತೀಯ ಹಾಗೂ ವಿದೇಶಿ ಮದ್ಯ ಮಾರಾಟ) ಎರಡನೇ ತಿದ್ದುಪಡಿ ನಿಯಮ–2025ರ ನಿಯಮ 5 ಮತ್ತು 5ಎ ಅಡಿಯಲ್ಲಿ ಪ್ರಸ್ತಾಪಿಸಿರುವ ಹೊಸ ಷರತ್ತುಗಳು, ಮೀಸಲು ಮತ್ತು ಅರ್ಹತಾ ಮಾನದಂಡ ಮತ್ತಿತರ ಅಂಶಗಳು ಮೂಲ ಕರ್ನಾಟಕ ಅಬಕಾರಿ ಕಾಯ್ದೆ–1965ರ ನಿಬಂಧನೆಗಳ ವ್ಯಾಪ್ತಿಯ ಹೊರಗಿದ್ದಂತಿವೆ. ಹಾಗಾಗಿ, ಈ ಬಗ್ಗೆ ವಿಸ್ತೃತವಾದ ವಿಚಾರಣೆಯ ಅಗತ್ಯವಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>ಅರ್ಜಿಯ ಸಾರಾಂಶ: ಹೆಚ್ಚುವರಿ ಅಬಕಾರಿ ಆದಾಯವನ್ನು ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 2025-26ನೇ ಸಾಲಿನ ಬಜೆಟ್ನಲ್ಲಿ ಅಬಕಾರಿ ಪರವಾನಗಿಗಳಿಗೆ ಇ-ಹರಾಜು ಪರಿಚಯಿಸುವುದಾಗಿ ಘೋಷಿಸಿತ್ತು. ಅದರಂತೆ ಈ ಹಿಂದೆ ನವೀಕರಣಗೊಳ್ಳದ ಅಥವಾ ಸ್ಥಗಿತಗೊಂಡಿರುವ ಸುಮಾರು 500 ಅಬಕಾರಿ ಸನ್ನದುಗಳನ್ನು ಪಟ್ಟಿ ಮಾಡಿ ಅವುಗಳ ಹರಾಜಿಗೆ ಸಿದ್ಧತೆ ನಡೆಸಿದೆ. </p>.<p>ಇದಕ್ಕೆ ಅನುಕೂಲವಾಗುವಂತೆ ಕಳೆದ ನವೆಂಬರ್ನಲ್ಲಿ ಕರ್ನಾಟಕ ಅಬಕಾರಿ (ಭಾರತೀಯ ಹಾಗೂ ವಿದೇಶಿ ಮದ್ಯ ಮಾರಾಟ) ಎರಡನೇ ತಿದ್ದುಪಡಿ ನಿಯಮ 5 ಮತ್ತು 5ಎ ಕರಡು ಪ್ರಕಟಿಸಿತ್ತು. ನಂತರ ಈ ಕರಡನ್ನು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆಯನ್ನು ಅರ್ಜಿದಾರರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿನ ಅಬಕಾರಿ ಸನ್ನದುಗಳನ್ನು ಇ-ಹರಾಜು ಮಾಡುವ ಉದ್ದೇಶದಿಂದ ಹೊರಡಿಸಲಾಗಿದ್ದ, ಕರ್ನಾಟಕ ಅಬಕಾರಿ (ಭಾರತೀಯ ಹಾಗೂ ವಿದೇಶಿ ಮದ್ಯ ಮಾರಾಟ) ಎರಡನೇ ತಿದ್ದುಪಡಿ ನಿಯಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ಈ ಸಂಬಂಧ, ‘ಕರ್ನಾಟಕ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್’ ಅಧ್ಯಕ್ಷ ಎಸ್.ಗುರುಸ್ವಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ ಹೆಗ್ಡೆ ಸೇರಿದಂತೆ ಐವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p>.<p>ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಡಿ.ಆರ್.ರವಿಶಂಕರ್ ಮಂಡಿಸಿದ, ‘ಸರ್ಕಾರದ ಆದೇಶವು, ಕಾನೂನು ಬಾಹಿರ, ಏಕಪಕ್ಷೀಯವಾದ ಸಕಾರಣವಿಲ್ಲದ ಮತ್ತು ಸಂವಿಧಾನದ ವಿಧಿಗಳಿಗೆ ವಿರುದ್ಧವಾಗಿದೆ’ ಎಂಬ ವಾದಾಂಶವನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಮುಂದಿನ ಆದೇಶದವರೆಗೆ 2025ರ ನಿಯಮ 5 ಮತ್ತು ನಿಯಮ 5ಎ ಅನುಷ್ಠಾನಕ್ಕೆ ಮಧ್ಯಂತರ ತಡೆ ನೀಡಿದೆ.</p>.<p>‘ಪ್ರತಿವಾದಿ ರಾಜ್ಯ ಸರ್ಕಾರ ಮಧ್ಯಂತರ ಆದೇಶದ ಮಾರ್ಪಾಡು ಅಥವಾ ತೆರವಿಗೆ ಅರ್ಜಿ ಸಲ್ಲಿಸಲು ಸ್ವತಂತ್ರವಿದೆ’ ಎಂದು ಸ್ಪಷ್ಟಪಡಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಿದೆ.</p>.<p>‘ಕರ್ನಾಟಕ ಅಬಕಾರಿ (ಭಾರತೀಯ ಹಾಗೂ ವಿದೇಶಿ ಮದ್ಯ ಮಾರಾಟ) ಎರಡನೇ ತಿದ್ದುಪಡಿ ನಿಯಮ–2025ರ ನಿಯಮ 5 ಮತ್ತು 5ಎ ಅಡಿಯಲ್ಲಿ ಪ್ರಸ್ತಾಪಿಸಿರುವ ಹೊಸ ಷರತ್ತುಗಳು, ಮೀಸಲು ಮತ್ತು ಅರ್ಹತಾ ಮಾನದಂಡ ಮತ್ತಿತರ ಅಂಶಗಳು ಮೂಲ ಕರ್ನಾಟಕ ಅಬಕಾರಿ ಕಾಯ್ದೆ–1965ರ ನಿಬಂಧನೆಗಳ ವ್ಯಾಪ್ತಿಯ ಹೊರಗಿದ್ದಂತಿವೆ. ಹಾಗಾಗಿ, ಈ ಬಗ್ಗೆ ವಿಸ್ತೃತವಾದ ವಿಚಾರಣೆಯ ಅಗತ್ಯವಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>ಅರ್ಜಿಯ ಸಾರಾಂಶ: ಹೆಚ್ಚುವರಿ ಅಬಕಾರಿ ಆದಾಯವನ್ನು ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 2025-26ನೇ ಸಾಲಿನ ಬಜೆಟ್ನಲ್ಲಿ ಅಬಕಾರಿ ಪರವಾನಗಿಗಳಿಗೆ ಇ-ಹರಾಜು ಪರಿಚಯಿಸುವುದಾಗಿ ಘೋಷಿಸಿತ್ತು. ಅದರಂತೆ ಈ ಹಿಂದೆ ನವೀಕರಣಗೊಳ್ಳದ ಅಥವಾ ಸ್ಥಗಿತಗೊಂಡಿರುವ ಸುಮಾರು 500 ಅಬಕಾರಿ ಸನ್ನದುಗಳನ್ನು ಪಟ್ಟಿ ಮಾಡಿ ಅವುಗಳ ಹರಾಜಿಗೆ ಸಿದ್ಧತೆ ನಡೆಸಿದೆ. </p>.<p>ಇದಕ್ಕೆ ಅನುಕೂಲವಾಗುವಂತೆ ಕಳೆದ ನವೆಂಬರ್ನಲ್ಲಿ ಕರ್ನಾಟಕ ಅಬಕಾರಿ (ಭಾರತೀಯ ಹಾಗೂ ವಿದೇಶಿ ಮದ್ಯ ಮಾರಾಟ) ಎರಡನೇ ತಿದ್ದುಪಡಿ ನಿಯಮ 5 ಮತ್ತು 5ಎ ಕರಡು ಪ್ರಕಟಿಸಿತ್ತು. ನಂತರ ಈ ಕರಡನ್ನು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆಯನ್ನು ಅರ್ಜಿದಾರರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>