<p>ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಮುಂದುವರಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್, ‘ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಸೈದ್ಧಾಂತಿಕ, ರಾಜಕೀಯ ಕಾರಣಕ್ಕಾಗಿ ಎನ್ಇಪಿ ರದ್ದುಗೊಳಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ರಚಿಸಿರುವ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ಘೋಷಿಸಿದೆ. ಇದರಿಂದ, ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ‘ ಎಂದರು.</p>.<p>‘ದೇಶದ 2.5 ಲಕ್ಷ ಗ್ರಾಮಗಳಲ್ಲಿ 676 ಜಿಲ್ಲೆಗಳು, 36 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಭೆ ನಡೆಸಿ 2 ಲಕ್ಷಕ್ಕೂ ಅಧಿಕ ಸಲಹೆಗಳನ್ನು ಪಡೆದು ಎನ್ಇಪಿಯನ್ನು ರಚಿಸಲಾಗಿದೆ. ದೇಶದ ಶಿಕ್ಷಣ ವ್ಯವಸ್ಥೆಯನ್ನು ಉತ್ಕೃಷ್ಟಗೊಳಿಸುವ ಹಾಗೂ ಜಾಗತಿಕ ಮಟ್ಟಕ್ಕೆ ಉನ್ನತೀಕರಿಸುವ ದೂರದೃಷ್ಟಿ ಹೊಂದಿರುವ ಎನ್ಇಪಿಯನ್ನು ಜಾರಿಗೊಳಿಸಬೇಕು. ದೇಶದ ಇತಿಹಾಸದಲ್ಲಿಯೇ ಅತ್ಯಂತ ಸಮಗ್ರ ರೂಪದಲ್ಲಿ ಹೊರಹೊಮ್ಮಿದ ಈ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳಬೇಕು. ಇದರಲ್ಲಿರುವ ಚಿಕ್ಕಪುಟ್ಟ ದೋಷಗಳನ್ನು ಸರಿಪಡಿಸಿ ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು. ಎಬಿವಿಪಿ ಜಂಟಿ ಕಾರ್ಯದರ್ಶಿ ನಿತಿನ್, ಹೇಮಂತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಮುಂದುವರಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್, ‘ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಸೈದ್ಧಾಂತಿಕ, ರಾಜಕೀಯ ಕಾರಣಕ್ಕಾಗಿ ಎನ್ಇಪಿ ರದ್ದುಗೊಳಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ರಚಿಸಿರುವ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ಘೋಷಿಸಿದೆ. ಇದರಿಂದ, ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ‘ ಎಂದರು.</p>.<p>‘ದೇಶದ 2.5 ಲಕ್ಷ ಗ್ರಾಮಗಳಲ್ಲಿ 676 ಜಿಲ್ಲೆಗಳು, 36 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಭೆ ನಡೆಸಿ 2 ಲಕ್ಷಕ್ಕೂ ಅಧಿಕ ಸಲಹೆಗಳನ್ನು ಪಡೆದು ಎನ್ಇಪಿಯನ್ನು ರಚಿಸಲಾಗಿದೆ. ದೇಶದ ಶಿಕ್ಷಣ ವ್ಯವಸ್ಥೆಯನ್ನು ಉತ್ಕೃಷ್ಟಗೊಳಿಸುವ ಹಾಗೂ ಜಾಗತಿಕ ಮಟ್ಟಕ್ಕೆ ಉನ್ನತೀಕರಿಸುವ ದೂರದೃಷ್ಟಿ ಹೊಂದಿರುವ ಎನ್ಇಪಿಯನ್ನು ಜಾರಿಗೊಳಿಸಬೇಕು. ದೇಶದ ಇತಿಹಾಸದಲ್ಲಿಯೇ ಅತ್ಯಂತ ಸಮಗ್ರ ರೂಪದಲ್ಲಿ ಹೊರಹೊಮ್ಮಿದ ಈ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳಬೇಕು. ಇದರಲ್ಲಿರುವ ಚಿಕ್ಕಪುಟ್ಟ ದೋಷಗಳನ್ನು ಸರಿಪಡಿಸಿ ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು. ಎಬಿವಿಪಿ ಜಂಟಿ ಕಾರ್ಯದರ್ಶಿ ನಿತಿನ್, ಹೇಮಂತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>