ಸ್ವಾಮಿ ಮತ್ತು ಅವರ ಕುಟುಂಬದ ಸದಸ್ಯರು ಶನಿವಾರವೇ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಅನಾರೋಗ್ಯ ನಿಮಿತ್ತ ಸ್ವಾಮಿ ಆಸ್ಪತ್ರೆ ಸೇರಿದ್ದರಿಂದ ಗೈರು ಹಾಜರಾದರು. ವಿಚಾರಣೆಗೆ ಹಾಜರಾಗಿದ್ದ ಗೌಡಯ್ಯ ಮತ್ತು ಅವರ ಪತ್ನಿಯನ್ನು ಕೆಲವು ಗಂಟೆ ಅಧಿಕಾರಿಗಳು ಪ್ರಶ್ನಿಸಿದರು. ವಿಚಾರಣೆ ಮಂಗಳವಾರವೂ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.