ವಿವಿಧ ಇಲಾಖೆಯ 9 ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿ 11 ಜಿಲ್ಲೆಯ 28 ಕಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮಂಗಳವಾರ ಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದೆ. ಕೆಲವರು ಐಷಾರಾಮಿ ಬಂಗಲೆಗಳನ್ನು ಹೊಂದಿದ್ದು, ಮನೆಯಲ್ಲಿ ನಗದು, ಚಿನ್ನ ಮತ್ತು ಬೆಳ್ಳಿ ಆಭರಣ, ದುಬಾರಿ ಬೆಲೆಯ ವಾಚುಗಳು, ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿದೆ. ಕಚೇರಿಯ ಕಡತಗಳನ್ನು ಮನೆಯಲ್ಲಿ ಇಟ್ಟುಕೊಂಡಿರುವುದೂ ಪತ್ತೆಯಾಗಿದೆ. ಎಲ್ಲಾ ಒಂಬತ್ತು ಅಧಿಕಾರಿಗಳ ಮನೆಗಳಲ್ಲಿ ಶೋಧ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.