<p><strong>ಬೆಂಗಳೂರು:</strong> ರಾಜ್ಯದ ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ಆದಾಯಕ್ಕೂ ಮೀರಿ ಅಪಾರ ಪ್ರಮಾಣದ ಆಸ್ತಿ ಮತ್ತು ಹಣ ಸಂಪಾದಿಸಿರುವುದನ್ನು ಪತ್ತೆ ಹಚ್ಚಿದ್ದಾರೆ.</p>.<p>ಬೆಂಗಳೂರು, ಬಳ್ಳಾರಿ, ಕೋಲಾರ, ಧಾರವಾಡ, ಕೊಪ್ಪಳ, ದಕ್ಷಿಣ ಕನ್ನಡ, ಚಿತ್ರದುರ್ಗ ಸೇರಿದಂತೆ ಏಳು ಅಧಿಕಾರಿಗಳಿಗೆ ಸೇರಿದ 36 ಕಡೆ ಏಕ ಕಾಲದಲ್ಲಿ ದಾಳಿ ನಡೆಸಲಾಯಿತು ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಮಂಗಳೂರು ಮಹಾನಗರ ಪಾಲಿಕೆ ನಗರ ಮತ್ತು ಗ್ರಾಮಾಂತರ ಯೋಜನೆಗಳ ಜಂಟಿ ನಿರ್ದೇಶಕ ಕೆ.ವಿ. ಜಯರಾಜ್ ಅವರು 2 ವಾಸದ ಮನೆ, 3 ನಿವೇಶನ, ₹11 ಲಕ್ಷ ನಗದು, ₹10 ಲಕ್ಷ ಮೌಲ್ಯದ ವಿಮಾ ಬಾಂಡ್ಗಳು, ಬ್ಯಾಂಕ್ ಖಾತೆಗಳಲ್ಲಿ ₹77 ಲಕ್ಷ, ಪತ್ನಿಯ ಹೆಸರಿನಲ್ಲಿ ₹20 ಲಕ್ಷ ಠೇವಣಿ, 191 ಗ್ರಾಂ ಚಿನ್ನದ ಆಭರಣಗಳು, 1 ಕೆ.ಜಿ ಬೆಳ್ಳಿ ಆಭರಣಗಳಿಗೆ ಒಡೆಯರಾಗಿದ್ದಾರೆ.</p>.<p>ಕೋಲಾರದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎನ್. ವಿಜಯಕುಮಾರ್ ಅವರ ಬಳಿ 3 ವಾಸದ ಮನೆ, 3 ಫ್ಲ್ಯಾಟ್ಗಳು, 3 ನಿವೇಶನ, 1 ಖಾಸಗಿ ಆಸ್ಪತ್ರೆ, 2 ಕಾರುಗಳು, 1 ದ್ವಿಚಕ್ರ ವಾಹನ, ಬ್ಯಾಂಕ್ಗಳಲ್ಲಿ ₹61.21 ಲಕ್ಷ ಠೇವಣಿ, 1 ಎಕರೆ 13 ಗುಂಟೆ ಕೃಷಿ ಜಮೀನು ಇರುವುದು ಪತ್ತೆಯಾಗಿದೆ.</p>.<p>ಬೆಂಗಳೂರಿನ ಸಹಕಾರ ಸಂಘಗಳ ಜಂಟಿ ನಿಬಂಧಕ ಡಿ. ಪಾಂಡುರಂಗ ಗರಗ ಅವರು 2 ವಾಸದ ಮನೆ, 1 ಫ್ಲಾಟ್, 3 ಕಾರುಗಳು, 1 ಟ್ರ್ಯಾಕ್ಟರ್, 3 ದ್ವಿಚಕ್ರ ವಾಹನ, 1 ಕೆ.ಜಿ 166 ಗ್ರಾಂ ಚಿನ್ನದ ಆಭರಣ, ₹20 ಲಕ್ಷ ಮೌಲ್ಯದ ವಿಮಾ ಪಾಲಿಸಿಗಳು, 31 ಕೆ.ಜಿ ಬೆಳ್ಳಿ ಆಭರಣ, 10 ಎಕರೆ ಕೃಷಿ ಜಮೀನು, ₹4.44 ಲಕ್ಷ ನಗದು, ₹20 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳಿಗೆ ಒಡೆಯರಾಗಿದ್ದಾರೆ.</p>.<p>ಧಾರವಾಡದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್) ಶ್ರೀನಿವಾಸ್ ಅವರ ಬಳಿ 2 ವಾಸದ ಮನೆ, 1 ಫಾರ್ಮ್ ಹೌಸ್, 2 ನಿವೇಶನಗಳು, 2 ಕಾರುಗಳು, 1 ಟ್ರ್ಯಾಕ್ಟರ್, 1 ದ್ವಿಚಕ್ರ ವಾಹನ, 850 ಗ್ರಾಂ ಚಿನ್ನ, 3 ಕೆ.ಜಿ 500 ಗ್ರಾಂ ಬೆಳ್ಳಿ ಆಭರಣ, ₹4.87 ಲಕ್ಷ ನಗದು, ಬ್ಯಾಂಕ್ ಖಾತೆಗಳಲ್ಲಿ ₹5 ಲಕ್ಷ ಮತ್ತು ₹63 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಇರುವುದು ಪತ್ತೆಯಾಗಿದೆ.</p>.<p>ಕೊಪ್ಪಳದ ಕಿಮ್ಸ್ನ ಫಾರ್ಮಾಕಾಲಜಿ ವಿಭಾಗದ ಮುಖ್ಯಸ್ಥ ಶ್ರೀನಿವಾಸ್ ಅವರ ಬಳಿ 1 ವಾಸದ ಮನೆ, 4 ನಿವೇಶನ, 2 ಕಾರುಗಳು, 2 ದ್ವಿಚಕ್ರ ವಾಹನಗಳು, 800 ಗ್ರಾಂ ಚಿನ್ನದ ಆಭರಣ, 9 ಕೆ.ಜಿ 300 ಗ್ರಾಂ ಬೆಳ್ಳಿ ಆಭರಣ, ₹1.94 ನಗದು ಇರುವುದು ಪತ್ತೆಯಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p class="Briefhead"><strong>ಕಿರಿಯ ಎಂಜಿನಿಯರ್ 8 ಫ್ಲ್ಯಾಟ್ ಒಡೆಯ</strong></p>.<p>ಲೋಕೋಪಯೋಗಿ ಇಲಾಖೆಯ ಮಾಗಡಿ ವಿಭಾಗದ ಕಿರಿಯ ಎಂಜಿನಿಯರ್ ಚನ್ನಬಸಪ್ಪ ಅವರು 8 ಫ್ಲಾಟ್ಗಳು, 1 ಸೂಪರ್ ಮಾರ್ಟ್, 1 ಫಾರ್ಮ್ ಹೌಸ್, 2 ಕಾರುಗಳು, 2 ದ್ವಿಚಕ್ರ ವಾಹನ, ₹1.02 ಲಕ್ಷ ನಗದು, 150 ಗ್ರಾಂ ಚಿನ್ನ ಮತ್ತು 650 ಗ್ರಾಂ ಬೆಳ್ಳಿ ಆಭರಣಗಳಿಗೆ ಒಡೆಯರಾಗಿದ್ದಾರೆ.</p>.<p class="Briefhead"><strong>ಎಂಜಿನಿಯರ್ ಬಳಿ ₹59 ಲಕ್ಷ ನಗದು</strong></p>.<p>ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ದೇವರಾಜ್ ಕಲ್ಮೇಶ ಶಿಗ್ಗಾವಿ ಅವರು 2 ವಾಸದ ಮನೆಗಳು, 2 ನಿವೇಶನಗಳು, 2 ಕಾರುಗಳು, 26 ಎಕರೆ ಕೃಷಿ ಜಮೀನು, ₹59.84 ಲಕ್ಷ ನಗದು, ಬ್ಯಾಂಕ್ ಖಾತೆಗಳಲ್ಲಿ ₹30 ಲಕ್ಷ ಠೇವಣಿ, 500 ಗ್ರಾಂ ಚಿನ್ನದ ಆವರಣ, 4 ಕೆ.ಜಿ ಬಳ್ಳಿ ಆಭರಣಗಳು ಮತ್ತು 3 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ಆದಾಯಕ್ಕೂ ಮೀರಿ ಅಪಾರ ಪ್ರಮಾಣದ ಆಸ್ತಿ ಮತ್ತು ಹಣ ಸಂಪಾದಿಸಿರುವುದನ್ನು ಪತ್ತೆ ಹಚ್ಚಿದ್ದಾರೆ.</p>.<p>ಬೆಂಗಳೂರು, ಬಳ್ಳಾರಿ, ಕೋಲಾರ, ಧಾರವಾಡ, ಕೊಪ್ಪಳ, ದಕ್ಷಿಣ ಕನ್ನಡ, ಚಿತ್ರದುರ್ಗ ಸೇರಿದಂತೆ ಏಳು ಅಧಿಕಾರಿಗಳಿಗೆ ಸೇರಿದ 36 ಕಡೆ ಏಕ ಕಾಲದಲ್ಲಿ ದಾಳಿ ನಡೆಸಲಾಯಿತು ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಮಂಗಳೂರು ಮಹಾನಗರ ಪಾಲಿಕೆ ನಗರ ಮತ್ತು ಗ್ರಾಮಾಂತರ ಯೋಜನೆಗಳ ಜಂಟಿ ನಿರ್ದೇಶಕ ಕೆ.ವಿ. ಜಯರಾಜ್ ಅವರು 2 ವಾಸದ ಮನೆ, 3 ನಿವೇಶನ, ₹11 ಲಕ್ಷ ನಗದು, ₹10 ಲಕ್ಷ ಮೌಲ್ಯದ ವಿಮಾ ಬಾಂಡ್ಗಳು, ಬ್ಯಾಂಕ್ ಖಾತೆಗಳಲ್ಲಿ ₹77 ಲಕ್ಷ, ಪತ್ನಿಯ ಹೆಸರಿನಲ್ಲಿ ₹20 ಲಕ್ಷ ಠೇವಣಿ, 191 ಗ್ರಾಂ ಚಿನ್ನದ ಆಭರಣಗಳು, 1 ಕೆ.ಜಿ ಬೆಳ್ಳಿ ಆಭರಣಗಳಿಗೆ ಒಡೆಯರಾಗಿದ್ದಾರೆ.</p>.<p>ಕೋಲಾರದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎನ್. ವಿಜಯಕುಮಾರ್ ಅವರ ಬಳಿ 3 ವಾಸದ ಮನೆ, 3 ಫ್ಲ್ಯಾಟ್ಗಳು, 3 ನಿವೇಶನ, 1 ಖಾಸಗಿ ಆಸ್ಪತ್ರೆ, 2 ಕಾರುಗಳು, 1 ದ್ವಿಚಕ್ರ ವಾಹನ, ಬ್ಯಾಂಕ್ಗಳಲ್ಲಿ ₹61.21 ಲಕ್ಷ ಠೇವಣಿ, 1 ಎಕರೆ 13 ಗುಂಟೆ ಕೃಷಿ ಜಮೀನು ಇರುವುದು ಪತ್ತೆಯಾಗಿದೆ.</p>.<p>ಬೆಂಗಳೂರಿನ ಸಹಕಾರ ಸಂಘಗಳ ಜಂಟಿ ನಿಬಂಧಕ ಡಿ. ಪಾಂಡುರಂಗ ಗರಗ ಅವರು 2 ವಾಸದ ಮನೆ, 1 ಫ್ಲಾಟ್, 3 ಕಾರುಗಳು, 1 ಟ್ರ್ಯಾಕ್ಟರ್, 3 ದ್ವಿಚಕ್ರ ವಾಹನ, 1 ಕೆ.ಜಿ 166 ಗ್ರಾಂ ಚಿನ್ನದ ಆಭರಣ, ₹20 ಲಕ್ಷ ಮೌಲ್ಯದ ವಿಮಾ ಪಾಲಿಸಿಗಳು, 31 ಕೆ.ಜಿ ಬೆಳ್ಳಿ ಆಭರಣ, 10 ಎಕರೆ ಕೃಷಿ ಜಮೀನು, ₹4.44 ಲಕ್ಷ ನಗದು, ₹20 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳಿಗೆ ಒಡೆಯರಾಗಿದ್ದಾರೆ.</p>.<p>ಧಾರವಾಡದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್) ಶ್ರೀನಿವಾಸ್ ಅವರ ಬಳಿ 2 ವಾಸದ ಮನೆ, 1 ಫಾರ್ಮ್ ಹೌಸ್, 2 ನಿವೇಶನಗಳು, 2 ಕಾರುಗಳು, 1 ಟ್ರ್ಯಾಕ್ಟರ್, 1 ದ್ವಿಚಕ್ರ ವಾಹನ, 850 ಗ್ರಾಂ ಚಿನ್ನ, 3 ಕೆ.ಜಿ 500 ಗ್ರಾಂ ಬೆಳ್ಳಿ ಆಭರಣ, ₹4.87 ಲಕ್ಷ ನಗದು, ಬ್ಯಾಂಕ್ ಖಾತೆಗಳಲ್ಲಿ ₹5 ಲಕ್ಷ ಮತ್ತು ₹63 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಇರುವುದು ಪತ್ತೆಯಾಗಿದೆ.</p>.<p>ಕೊಪ್ಪಳದ ಕಿಮ್ಸ್ನ ಫಾರ್ಮಾಕಾಲಜಿ ವಿಭಾಗದ ಮುಖ್ಯಸ್ಥ ಶ್ರೀನಿವಾಸ್ ಅವರ ಬಳಿ 1 ವಾಸದ ಮನೆ, 4 ನಿವೇಶನ, 2 ಕಾರುಗಳು, 2 ದ್ವಿಚಕ್ರ ವಾಹನಗಳು, 800 ಗ್ರಾಂ ಚಿನ್ನದ ಆಭರಣ, 9 ಕೆ.ಜಿ 300 ಗ್ರಾಂ ಬೆಳ್ಳಿ ಆಭರಣ, ₹1.94 ನಗದು ಇರುವುದು ಪತ್ತೆಯಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p class="Briefhead"><strong>ಕಿರಿಯ ಎಂಜಿನಿಯರ್ 8 ಫ್ಲ್ಯಾಟ್ ಒಡೆಯ</strong></p>.<p>ಲೋಕೋಪಯೋಗಿ ಇಲಾಖೆಯ ಮಾಗಡಿ ವಿಭಾಗದ ಕಿರಿಯ ಎಂಜಿನಿಯರ್ ಚನ್ನಬಸಪ್ಪ ಅವರು 8 ಫ್ಲಾಟ್ಗಳು, 1 ಸೂಪರ್ ಮಾರ್ಟ್, 1 ಫಾರ್ಮ್ ಹೌಸ್, 2 ಕಾರುಗಳು, 2 ದ್ವಿಚಕ್ರ ವಾಹನ, ₹1.02 ಲಕ್ಷ ನಗದು, 150 ಗ್ರಾಂ ಚಿನ್ನ ಮತ್ತು 650 ಗ್ರಾಂ ಬೆಳ್ಳಿ ಆಭರಣಗಳಿಗೆ ಒಡೆಯರಾಗಿದ್ದಾರೆ.</p>.<p class="Briefhead"><strong>ಎಂಜಿನಿಯರ್ ಬಳಿ ₹59 ಲಕ್ಷ ನಗದು</strong></p>.<p>ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ದೇವರಾಜ್ ಕಲ್ಮೇಶ ಶಿಗ್ಗಾವಿ ಅವರು 2 ವಾಸದ ಮನೆಗಳು, 2 ನಿವೇಶನಗಳು, 2 ಕಾರುಗಳು, 26 ಎಕರೆ ಕೃಷಿ ಜಮೀನು, ₹59.84 ಲಕ್ಷ ನಗದು, ಬ್ಯಾಂಕ್ ಖಾತೆಗಳಲ್ಲಿ ₹30 ಲಕ್ಷ ಠೇವಣಿ, 500 ಗ್ರಾಂ ಚಿನ್ನದ ಆವರಣ, 4 ಕೆ.ಜಿ ಬಳ್ಳಿ ಆಭರಣಗಳು ಮತ್ತು 3 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>