<p><strong>ಬೆಂಗಳೂರು: </strong>ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದ್ದ ಬೆಸ್ಕಾಂ ಉತ್ತರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎಲ್.ಎಸ್. ಲಕ್ಷ್ಮೀಶ್ ಬಳಿ ಎರಡು ಫ್ಲ್ಯಾಟ್, ಐದು ನಿವೇಶನ ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಇರುವುದು ಪತ್ತೆಯಾಗಿದೆ.</p>.<p>ಸೋಮವಾರ ವ್ಯಕ್ತಿಯೊಬ್ಬರಿಂದ ₹ 10,000 ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಎಸಿಬಿ ಬಂಧಿಸಿತ್ತು. ಮಾಗಡಿ ರಸ್ತೆಯ ಪ್ರೆಸ್ಟೀಜ್ ವುಡ್ಸ್ ಅಪಾರ್ಟ್ಮೆಂಟ್ನಲ್ಲಿರುವ ಆರೋಪಿಯ ಮನೆ ಹಾಗೂ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನಲ್ಲಿರುವ ವಾಸದ ಮನೆಗಳ ಮೇಲೆ ಬುಧವಾರ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದರು.</p>.<p>ಬೆಂಗಳೂರಿನಲ್ಲಿ ಎರಡು ಫ್ಲ್ಯಾಟ್, ಮೂರು ನಿವೇಶನ, ಮೈಸೂರಿನಲ್ಲಿ ಎರಡು ನಿವೇಶನ, ರಾಮನಗರ ಜಿಲ್ಲೆಯ ಬೀಗೆಹಳ್ಳಿಯಲ್ಲಿ 2 ಎಕರೆ 8 ಗುಂಟೆ ಕೃಷಿ ಜಮೀನು, ಅರಸೀಕೆರೆ ತಾಲ್ಲೂಕಿನಲ್ಲಿ 3 ಎಕರೆ ಕೃಷಿ ಜಮೀನು ಹೊಂದಿರುವುದು ಪತ್ತೆಯಾಗಿದೆ. ಮನೆಯಲ್ಲಿ ₹ 9.90 ಲಕ್ಷ ನಗದು, ₹ 5.78 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನೂ ಪತ್ತೆಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಆರೋಪಿಯ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಶೋಧನಾ ಕಾರ್ಯವು ಮುಂದುವರಿದಿದೆ. ಆರೋಪಿಯು ಹೊಂದಿರುವ ಆಸ್ತಿಯ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದ್ದ ಬೆಸ್ಕಾಂ ಉತ್ತರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎಲ್.ಎಸ್. ಲಕ್ಷ್ಮೀಶ್ ಬಳಿ ಎರಡು ಫ್ಲ್ಯಾಟ್, ಐದು ನಿವೇಶನ ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಇರುವುದು ಪತ್ತೆಯಾಗಿದೆ.</p>.<p>ಸೋಮವಾರ ವ್ಯಕ್ತಿಯೊಬ್ಬರಿಂದ ₹ 10,000 ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಎಸಿಬಿ ಬಂಧಿಸಿತ್ತು. ಮಾಗಡಿ ರಸ್ತೆಯ ಪ್ರೆಸ್ಟೀಜ್ ವುಡ್ಸ್ ಅಪಾರ್ಟ್ಮೆಂಟ್ನಲ್ಲಿರುವ ಆರೋಪಿಯ ಮನೆ ಹಾಗೂ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನಲ್ಲಿರುವ ವಾಸದ ಮನೆಗಳ ಮೇಲೆ ಬುಧವಾರ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದರು.</p>.<p>ಬೆಂಗಳೂರಿನಲ್ಲಿ ಎರಡು ಫ್ಲ್ಯಾಟ್, ಮೂರು ನಿವೇಶನ, ಮೈಸೂರಿನಲ್ಲಿ ಎರಡು ನಿವೇಶನ, ರಾಮನಗರ ಜಿಲ್ಲೆಯ ಬೀಗೆಹಳ್ಳಿಯಲ್ಲಿ 2 ಎಕರೆ 8 ಗುಂಟೆ ಕೃಷಿ ಜಮೀನು, ಅರಸೀಕೆರೆ ತಾಲ್ಲೂಕಿನಲ್ಲಿ 3 ಎಕರೆ ಕೃಷಿ ಜಮೀನು ಹೊಂದಿರುವುದು ಪತ್ತೆಯಾಗಿದೆ. ಮನೆಯಲ್ಲಿ ₹ 9.90 ಲಕ್ಷ ನಗದು, ₹ 5.78 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನೂ ಪತ್ತೆಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಆರೋಪಿಯ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಶೋಧನಾ ಕಾರ್ಯವು ಮುಂದುವರಿದಿದೆ. ಆರೋಪಿಯು ಹೊಂದಿರುವ ಆಸ್ತಿಯ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>