‘ಅಧಿಕಾರಿಗಳಿಬ್ಬರೂ ಆದಾಯ ಮೀರಿ ಆಸ್ತಿ ಗಳಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಅಲ್ಲದೆ, ತನಿಖೆಗೆ ಸಹಕರಿಸದೆ ದುರ್ನಡತೆ ತೋರಿದ್ದಾರೆ’ ಎಂದು ಎಸಿಬಿ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯವೇ ಸಸ್ಪೆಂಡ್ಗೆ ಶಿಫಾರಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.