<p><strong>ಕಲಬುರ್ಗಿ: </strong>ತಾಲ್ಲೂಕಿನ ಸಾವಳಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ಏಳು ಜನ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.ಭಾನುವಾರ ನಸುಕಿನಲ್ಲಿ ಈ ಅಪಘಾತ ಸಂಭವಿಸಿದೆ.</p>.<p>ಇವರಲ್ಲಿ ಒಬ್ಬ ಗರ್ಭಿಣಿಇರ್ಫಾನಾ ಬೇಗಂ (25) ಸೇರಿ ನಾಲ್ವರು ಮಹಿಳೆಯರು ಹಾಗೂ ಮೂವರು ಪುರುಷರು ಇದ್ದಾರೆ. ಇನ್ನೊಬ್ಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ಎಲ್ಲರೂ ಆಳಂದದ ನಿವಾಸಿಗಳಾಗಿದ್ದು, ಸಹೋದರ ಸಂಬಂಧಿಕರು.</p>.<p class="Subhead"><strong>ಘಟನೆ ವಿವರ: </strong>ಇರ್ಫಾನಾ ಅವರಿಗೆ ಭಾನುವಾರ ನಸುಕಿನ 3 ಗಂಟೆಗೆ ಹೆರಿಗೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಕುಟುಂಬದವರು ಆಳಂದದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಅವರಿಗೆ ರಕ್ತದೊತ್ತಡ ತೀವ್ರ ಕಡಿಮೆಯಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿಗೆ ಕರೆದೊಯ್ಯಲು ಅಲ್ಲಿನ ವೈದ್ಯರು ಸೂಚಿಸಿದರು. ತಕ್ಷಣವೇ<br />ಕುಟುಂಬದವರು ನಸುಕಿನ 4ಕ್ಕೆ ಸಂಬಂಧಿಕರಾದ ಮುನೀರ್ ಅವರ ಕಾರ್ ಮಾಡಿಕೊಂಡು ಕಲಬುರ್ಗಿಯತ್ತ ವೇಗವಾಗಿ ಹೊರಟರು.</p>.<p>ಕಲಬುರ್ಗಿ ತಲುಪಲು ಇನ್ನು 15 ಕಿ.ಮೀ ಅಂತರದಲ್ಲಿ ಸಾವಳಗಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಒಂದೆಡೆ ಲಾರಿ ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದರೆ, ಮತ್ತೊಂದೆಡೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.</p>.<p>ಅಪಘಾತವಾಗಿ ಎರಡು ತಾಸಿನ ನಂತರವೂ ಶವಗಳನ್ನು ವಾಹನದಿಂದ ಹೊರ ತೆಗೆಯಲು ಸಾಧ್ಯವಾಗಲಿಲ್ಲ. ನಂತರ ಗ್ರಾಮದ ಯುವಕು ಕಾರಿನ ಬಾಗಿಲುಗಳನ್ನು ಮುರಿದು ಶವಗಳನ್ನು ಹೊರತೆಗೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ತಾಲ್ಲೂಕಿನ ಸಾವಳಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ಏಳು ಜನ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.ಭಾನುವಾರ ನಸುಕಿನಲ್ಲಿ ಈ ಅಪಘಾತ ಸಂಭವಿಸಿದೆ.</p>.<p>ಇವರಲ್ಲಿ ಒಬ್ಬ ಗರ್ಭಿಣಿಇರ್ಫಾನಾ ಬೇಗಂ (25) ಸೇರಿ ನಾಲ್ವರು ಮಹಿಳೆಯರು ಹಾಗೂ ಮೂವರು ಪುರುಷರು ಇದ್ದಾರೆ. ಇನ್ನೊಬ್ಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ಎಲ್ಲರೂ ಆಳಂದದ ನಿವಾಸಿಗಳಾಗಿದ್ದು, ಸಹೋದರ ಸಂಬಂಧಿಕರು.</p>.<p class="Subhead"><strong>ಘಟನೆ ವಿವರ: </strong>ಇರ್ಫಾನಾ ಅವರಿಗೆ ಭಾನುವಾರ ನಸುಕಿನ 3 ಗಂಟೆಗೆ ಹೆರಿಗೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಕುಟುಂಬದವರು ಆಳಂದದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಅವರಿಗೆ ರಕ್ತದೊತ್ತಡ ತೀವ್ರ ಕಡಿಮೆಯಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿಗೆ ಕರೆದೊಯ್ಯಲು ಅಲ್ಲಿನ ವೈದ್ಯರು ಸೂಚಿಸಿದರು. ತಕ್ಷಣವೇ<br />ಕುಟುಂಬದವರು ನಸುಕಿನ 4ಕ್ಕೆ ಸಂಬಂಧಿಕರಾದ ಮುನೀರ್ ಅವರ ಕಾರ್ ಮಾಡಿಕೊಂಡು ಕಲಬುರ್ಗಿಯತ್ತ ವೇಗವಾಗಿ ಹೊರಟರು.</p>.<p>ಕಲಬುರ್ಗಿ ತಲುಪಲು ಇನ್ನು 15 ಕಿ.ಮೀ ಅಂತರದಲ್ಲಿ ಸಾವಳಗಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಒಂದೆಡೆ ಲಾರಿ ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದರೆ, ಮತ್ತೊಂದೆಡೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.</p>.<p>ಅಪಘಾತವಾಗಿ ಎರಡು ತಾಸಿನ ನಂತರವೂ ಶವಗಳನ್ನು ವಾಹನದಿಂದ ಹೊರ ತೆಗೆಯಲು ಸಾಧ್ಯವಾಗಲಿಲ್ಲ. ನಂತರ ಗ್ರಾಮದ ಯುವಕು ಕಾರಿನ ಬಾಗಿಲುಗಳನ್ನು ಮುರಿದು ಶವಗಳನ್ನು ಹೊರತೆಗೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>