ಫೆ. 10ರಂದು ಮಧ್ಯಾಹ್ನ 3ಕ್ಕೆ ತಾಲ್ಲೂಕಿನ ಮರಿಯಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ 50ರ ಬಳಿ ಮರಿಯಮ್ಮನಹಳ್ಳಿ ತಾಂಡಾದ ರವಿ ನಾಯ್ಕಗೆ (16) ಕಾರು ಡಿಕ್ಕಿ ಹೊಡೆದಿದದ್ದಕ್ಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದ. ಕಾರಿನ ಚಾಲಕ ರಾಹುಲ್, ಕಾರಿನಲ್ಲಿದ್ದ ರಾಕೇಶ್, ಶಿವಕುಮಾರ ಹಾಗೂ ವರುಣ್ ಗಾಯಗೊಂಡಿದ್ದರು. ಸಚಿನ್ ಎನ್ನುವವನಿಗೆ ತೀವ್ರ ಗಾಯವಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದ. ಆದರೆ, ಸಚಿವರ ಮಗನೇ ಕಾರು ಓಡಿಸಿ, ಇಬ್ಬರ ಸಾವಿಗೆ ಕಾರಣವಾಗಿದ್ದಾನೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಪೊಲೀಸರ ಕಾರ್ಯವೈಖರಿ ವಿರುದ್ಧವೇ ಅನೇಕ ಪ್ರಶ್ನೆಗಳು ಎದ್ದಿವೆ.