ಬೆಂಗಳೂರು: ಆಂಧ್ರಪ್ರದೇಶದ ಪೆನುಕೊಂಡ ಬಳಿ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರಿನ ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಜೆ.ಪಿ.ನಗರ 2ನೇ ಹಂತದ ನಿವಾಸಿ ಅನಿಲ್ (52), ಅವರ ಪುತ್ರ ಆದಿತ್ಯಾ (19) ಹಾಗೂ ಸಂಬಂಧಿಕಮಲಾ (78) ಮೃತರು. ಅಸ್ತಮಾದಿಂದ ಬಳುತ್ತಿದ್ದ ಕಮಲಾ ಅವರಿಗೆ ಚಿಕಿತ್ಸೆ ಕೊಡಿಸಲೆಂದು ಬಳ್ಳಾರಿಗೆ ಕಾರಿನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ.
‘ಕಾರು ಹಾಗೂ ತಮಿಳುನಾಡು ನೋಂದಣಿ ಸಂಖ್ಯೆಯ ಲಾರಿ ನಡುವೆ ಅಪಘಾತ ಆಗಿತ್ತು. ಕಾರು ಜಖಂಗೊಂಡಿತ್ತು. ತೀವ್ರ ಗಾಯಗೊಂಡ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
‘ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯ ಕಾರಣ. ಆದರೆ, ಆತನ ವಿರುದ್ಧ ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ’ ಎಂದು ಮೃತರ ಸಂಬಂಧಿಕರು ದೂರಿದರು.