‘ಸಿಬಿಐ ಅಧಿಕಾರಿಗಳೇ ಪರವಾಗಿಲ್ಲ’
‘ಸಿಬಿಐನವರೇ ಪ್ರಶ್ನೆ ಕೇಳಲಿಲ್ಲ ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ. ಆದರೆ ಲೋಕಾಯುಕ್ತದವರು ವಿಚಿತ್ರ ಪ್ರಶ್ನೆಗಳನ್ನು ಕೇಳಿ ಹಿಂಸೆ ಕೊಡುತ್ತಿದ್ದಾರೆ. ಇವರಿಗಿಂತ ಸಿಬಿಐನವರೇ ಪರವಾಗಿಲ್ಲ’ ಎಂದು ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು ‘ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐ ತನಿಖೆ ನಿಲ್ಲಿಸಿಲ್ಲ. ನನ್ನ ಕುಟುಂಬ ಮತ್ತು ಸ್ನೇಹಿತರಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಸಿಬಿಐ ಕಿರುಕುಳ ನೀಡುತ್ತಿದೆ. ಲೋಕಾಯುಕ್ತವೂ ಇದೇ ಕೆಲಸ ಮಾಡುತ್ತಿದೆ’ ಎಂದಿದ್ದಾರೆ.