<p><strong>ಚೆನ್ನೈ</strong>: ಕನ್ನಡದ ಹಿರಿಯ ನಟ ರಾಜ್ಕುಮಾರ್ ಅಪಹರಣ ಪ್ರಕರಣದಲ್ಲಿ 9 ಜನರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ತಾಳವಾಡಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.</p><p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ವೇಲ್ಮುರುಗನ್ ಮತ್ತು ಎಂ.ಜ್ಯೋತಿರಾಮನ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.</p><p>26 ವರ್ಷದ ಹಿಂದೆ ಈರೋಡ್ ಜಿಲ್ಲೆಯ ತಾಳವಾಡಿ ಬಳಿ ತೋಟದ ಮನೆಯಲ್ಲಿ ತಂಗಿದ್ದ ರಾಜ್ಕುಮಾರ್ ಅವರನ್ನು ವೀರಪ್ಪನ್ ಮತ್ತು ಆತನ ಸಹಚರರು ಅಪಹರಿಸಿ ಒತ್ತೆಯಾಳಾಗಿ ಇಟ್ಟುಕೊಂಡಿದ್ದರು. 108 ದಿನಗಳ ನಂತರ ಬಿಡುಗಡೆ ಮಾಡಿದ್ದರು.</p><p>ಈ ಪ್ರಕರಣದಲ್ಲಿ ವೀರಪ್ಪನ್ ಮತ್ತು ಅವರ ಸಹಚರರಾದ ಸೇತುಕುಲಿ ಗೋವಿಂದನ್, ಚಂದ್ರಗೌಡ, ಮಲ್ಲು, ರಮೇಶ್, ಗೋವಿಂದರಾಜ್, ಆಂಡ್ರಿಲ್, ಪಸುವಣ್ಣ, ಪುಟ್ಟುಸ್ವಾಮಿ, ಕಲ್ಮಂಡಿ ರಾಮನ್, ಮಾರನ್, ಸೆಲ್ವನ್, ಅಮೃತಲಿಂಗಂ ಮತ್ತು ನಾಗರಾಜ್ ವಿರುದ್ಧ ತಾಳವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.</p><p>ಪ್ರಕರಣ ಸಂಬಂಧ ದೋಷಾರೋಪಪಟ್ಟಿ ಸಲ್ಲಿಸುವ ಮೊದಲೇ ವೀರಪ್ಪನ್ ಮತ್ತು ಆತನ ಸಹಚರರಾದ ಸೇತುಕುಳಿ ಗೋವಿಂದನ್, ಚಂದ್ರಗೌಡ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದರು. ಮತ್ತೊಬ್ಬ ಆರೋಪಿ ಮಲ್ಲು ಪ್ರಕರಣದ ವಿಚಾರಣೆ ಹಂತದಲ್ಲಿ ಮೃತಪಟ್ಟಿದ್ದರು. ರಮೇಶ್ ಎಂಬಾತ ತಲೆಮರೆಸಿಕೊಂಡಿದ್ದನು.</p><p>2018ರ ಸೆಪ್ಟೆಂಬರ್ 25ರಂದು ತೀರ್ಪು ಪ್ರಕಟಿಸಿದ್ದ ಗೋಪಿಚೆಟ್ಟಿಪಾಳ್ಯಂ 3ನೇ ಸೆಷನ್ಸ್ ನ್ಯಾಯಾಲಯ ಉಳಿದ 9 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಕನ್ನಡದ ಹಿರಿಯ ನಟ ರಾಜ್ಕುಮಾರ್ ಅಪಹರಣ ಪ್ರಕರಣದಲ್ಲಿ 9 ಜನರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ತಾಳವಾಡಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.</p><p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ವೇಲ್ಮುರುಗನ್ ಮತ್ತು ಎಂ.ಜ್ಯೋತಿರಾಮನ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.</p><p>26 ವರ್ಷದ ಹಿಂದೆ ಈರೋಡ್ ಜಿಲ್ಲೆಯ ತಾಳವಾಡಿ ಬಳಿ ತೋಟದ ಮನೆಯಲ್ಲಿ ತಂಗಿದ್ದ ರಾಜ್ಕುಮಾರ್ ಅವರನ್ನು ವೀರಪ್ಪನ್ ಮತ್ತು ಆತನ ಸಹಚರರು ಅಪಹರಿಸಿ ಒತ್ತೆಯಾಳಾಗಿ ಇಟ್ಟುಕೊಂಡಿದ್ದರು. 108 ದಿನಗಳ ನಂತರ ಬಿಡುಗಡೆ ಮಾಡಿದ್ದರು.</p><p>ಈ ಪ್ರಕರಣದಲ್ಲಿ ವೀರಪ್ಪನ್ ಮತ್ತು ಅವರ ಸಹಚರರಾದ ಸೇತುಕುಲಿ ಗೋವಿಂದನ್, ಚಂದ್ರಗೌಡ, ಮಲ್ಲು, ರಮೇಶ್, ಗೋವಿಂದರಾಜ್, ಆಂಡ್ರಿಲ್, ಪಸುವಣ್ಣ, ಪುಟ್ಟುಸ್ವಾಮಿ, ಕಲ್ಮಂಡಿ ರಾಮನ್, ಮಾರನ್, ಸೆಲ್ವನ್, ಅಮೃತಲಿಂಗಂ ಮತ್ತು ನಾಗರಾಜ್ ವಿರುದ್ಧ ತಾಳವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.</p><p>ಪ್ರಕರಣ ಸಂಬಂಧ ದೋಷಾರೋಪಪಟ್ಟಿ ಸಲ್ಲಿಸುವ ಮೊದಲೇ ವೀರಪ್ಪನ್ ಮತ್ತು ಆತನ ಸಹಚರರಾದ ಸೇತುಕುಳಿ ಗೋವಿಂದನ್, ಚಂದ್ರಗೌಡ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದರು. ಮತ್ತೊಬ್ಬ ಆರೋಪಿ ಮಲ್ಲು ಪ್ರಕರಣದ ವಿಚಾರಣೆ ಹಂತದಲ್ಲಿ ಮೃತಪಟ್ಟಿದ್ದರು. ರಮೇಶ್ ಎಂಬಾತ ತಲೆಮರೆಸಿಕೊಂಡಿದ್ದನು.</p><p>2018ರ ಸೆಪ್ಟೆಂಬರ್ 25ರಂದು ತೀರ್ಪು ಪ್ರಕಟಿಸಿದ್ದ ಗೋಪಿಚೆಟ್ಟಿಪಾಳ್ಯಂ 3ನೇ ಸೆಷನ್ಸ್ ನ್ಯಾಯಾಲಯ ಉಳಿದ 9 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>