‘ರಾಜ್ಯದ 10 ಲಕ್ಷ ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ನೆರವು ವಿತರಿಸಲಾಗಿದೆ. 6 ಲಕ್ಷ ಕೃಷಿ ಕಾರ್ಮಿಕರ ಮಕ್ಕಳನ್ನು ಗುರುತಿಸಿದ್ದು, ಅವರಿಗೂ ಶೀಘ್ರವೇ ‘ವಿದ್ಯಾನಿಧಿ’ ಅಡಿ ವಿದ್ಯಾರ್ಥಿ ವೇತನ ವಿತರಿಸಲಾಗುವುದು. ನೇಕಾರರು, ಮೀನುಗಾರರು, ಟ್ಯಾಕ್ಸಿ ಹಾಗೂ ಆಟೊರಿಕ್ಷಾ ಚಾಲಕರ ಮಕ್ಕಳಿಗೂ ಈ ಯೋಜನೆ ಸೌಲಭ್ಯಗಳನ್ನು ವಿಸ್ತರಿಸಲಾಗಿದೆ. ದುಡಿಯುವ ವರ್ಗಕ್ಕೆ ಸರ್ಕಾರ ಬಲ ತುಂಬುತ್ತಿದೆ’ ಎಂದು ಹೇಳಿದರು.