<p><strong>ಬೆಂಗಳೂರು</strong>: ‘ಇನ್ನು ಮುಂದೆ ಪ್ರತಿ ತಿಂಗಳ ಕೊನೆಗೆ ನಾನೇ ಒಬ್ಬೊಬ್ಬರಿಂದಲೇ ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ನಡೆಸುತ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸುತ್ತೇನೆ’ ಎಂದು ವಾಣಿಜ್ಯ ಇಲಾಖೆಯ ಜಂಟಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.</p>.<p>ವಾಣಿಜ್ಯ ತೆರಿಗೆ ಸಂಗ್ರಹ ಕುರಿತು ಮಂಗಳವಾರ ಅವರು ಪ್ರಗತಿ ಪರಿಶೀಲನೆ ನಡೆಸಿದರು.</p><p>ವಾಣಿಜ್ಯ ಇಲಾಖೆ ಮೂಲಕ 2024-25ನೇ ಸಾಲಿನಲ್ಲಿ ಒಟ್ಟು ಗುರಿ ₹ 1.10 ಲಕ್ಷ ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್ ಅಂತ್ಯದವರೆಗೆ ₹ 58,773 ಕೋಟಿ (ಶೇ 53.5) ಸಂಗ್ರಹಿಸಲಾಗಿದೆ. ಅದರಲ್ಲಿ ಜಿಎಸ್ಟಿ ₹ 44,783 ಕೋಟಿ, ಕೆಎಸ್ಟಿ ₹ 13,193 ಕೋಟಿ, ವೃತ್ತಿ ತೆರಿಗೆ ₹ 797 ಕೋಟಿ ಸೇರಿದೆ. 2023-24ನೇ ಸಾಲಿನ ಈ ಅವಧಿಗೆ ಹೋಲಿಸಿದರೆ ₹ 5,957 ಕೋಟಿ ಹೆಚ್ಚುವರಿ ಸಂಗ್ರಹವಾಗಿದೆ.</p><p>‘ಮುಂದಿನ ಐದು ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳು ₹ 10,200 ಕೋಟಿ ತೆರಿಗೆ ಸಂಗ್ರಹ ಗುರಿ ಇರಿಸಿ ಮಾರ್ಚ್ ಒಳಗೆ ಒಟ್ಟು ಗುರಿ ಸಾಧಿಸಬೇಕು. ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಗುರಿ ಸಾಧನೆ ಸಾಧ್ಯ. ರಾಜ್ಯದ ಅಭಿವೃದ್ಧಿಗೆ ತೆರಿಗೆ ಸಂಗ್ರಹದಲ್ಲಿ ಗುರಿ ಸಾಧಿಸಲೇ ಬೇಕಿದೆ’ ಎಂದರು.</p><p>‘ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ನಡೆಸುತ್ತೇನೆ. ನಿಗದಿತ ಗುರಿ ಸಾಧಿಸದ ಅಧಿಕಾರಿಗಳನ್ನು ಹೊಣೆಗಾರರಾಗಿ ಮಾಡಲಾಗುವುದು. ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆ ಆಗಲೇ ಬಾರದು. ಕರ ಸಮಾಧಾನ ಯೋಜನೆ ಅಡಿ ₹ 2 ಸಾವಿರ ಕೋಟಿ ಹೆಚ್ಚುವರಿ ಸಂಗ್ರಹದ ನಿರೀಕ್ಷೆಯಿದೆ’ ಎಂದರು.</p><p>ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಎ.ಶಿಖಾ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.</p>.<h2>ಅಬಕಾರಿ ಇಲಾಖೆ ತೆರಿಗೆ ಶೇ 52.53 ಗುರಿ ಸಾಧನೆ: </h2>.<p>‘ಅಬಕಾರಿ ಇಲಾಖೆಗೆ 2024-25ನೇ ಸಾಲಿಗೆ ಒಟ್ಟು ಗುರಿ ₹ 38,525 ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್ 28ರವರೆಗೆ ₹ 20,237 ಕೋಟಿ (ಶೇ 52.53) ಗುರಿ ಸಾಧನೆ ಮಾಡಲಾಗಿದೆ. ಮಾರ್ಚ್ ಒಳಗೆ ನಿಗದಿತ ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.</p><p>ಅಬಕಾರಿ ಇಲಾಖೆಯ ಪ್ರಗತಿಯ ಪರಿಶೀಲನೆಯನ್ನೂ ಮುಖ್ಯಮಂತ್ರಿ ನಡೆಸಿದರು. </p><p>ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ₹ 1301.15 ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹಿಸಲಾಗಿದೆ.</p><p>‘ಗೋವಾದಿಂದ ಅಕ್ರಮ ಮದ್ಯ ಸಾಗಣೆ ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದೂ ಮುಖ್ಯಮಂತ್ರಿ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಇನ್ನು ಮುಂದೆ ಪ್ರತಿ ತಿಂಗಳ ಕೊನೆಗೆ ನಾನೇ ಒಬ್ಬೊಬ್ಬರಿಂದಲೇ ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ನಡೆಸುತ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸುತ್ತೇನೆ’ ಎಂದು ವಾಣಿಜ್ಯ ಇಲಾಖೆಯ ಜಂಟಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.</p>.<p>ವಾಣಿಜ್ಯ ತೆರಿಗೆ ಸಂಗ್ರಹ ಕುರಿತು ಮಂಗಳವಾರ ಅವರು ಪ್ರಗತಿ ಪರಿಶೀಲನೆ ನಡೆಸಿದರು.</p><p>ವಾಣಿಜ್ಯ ಇಲಾಖೆ ಮೂಲಕ 2024-25ನೇ ಸಾಲಿನಲ್ಲಿ ಒಟ್ಟು ಗುರಿ ₹ 1.10 ಲಕ್ಷ ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್ ಅಂತ್ಯದವರೆಗೆ ₹ 58,773 ಕೋಟಿ (ಶೇ 53.5) ಸಂಗ್ರಹಿಸಲಾಗಿದೆ. ಅದರಲ್ಲಿ ಜಿಎಸ್ಟಿ ₹ 44,783 ಕೋಟಿ, ಕೆಎಸ್ಟಿ ₹ 13,193 ಕೋಟಿ, ವೃತ್ತಿ ತೆರಿಗೆ ₹ 797 ಕೋಟಿ ಸೇರಿದೆ. 2023-24ನೇ ಸಾಲಿನ ಈ ಅವಧಿಗೆ ಹೋಲಿಸಿದರೆ ₹ 5,957 ಕೋಟಿ ಹೆಚ್ಚುವರಿ ಸಂಗ್ರಹವಾಗಿದೆ.</p><p>‘ಮುಂದಿನ ಐದು ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳು ₹ 10,200 ಕೋಟಿ ತೆರಿಗೆ ಸಂಗ್ರಹ ಗುರಿ ಇರಿಸಿ ಮಾರ್ಚ್ ಒಳಗೆ ಒಟ್ಟು ಗುರಿ ಸಾಧಿಸಬೇಕು. ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಗುರಿ ಸಾಧನೆ ಸಾಧ್ಯ. ರಾಜ್ಯದ ಅಭಿವೃದ್ಧಿಗೆ ತೆರಿಗೆ ಸಂಗ್ರಹದಲ್ಲಿ ಗುರಿ ಸಾಧಿಸಲೇ ಬೇಕಿದೆ’ ಎಂದರು.</p><p>‘ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ನಡೆಸುತ್ತೇನೆ. ನಿಗದಿತ ಗುರಿ ಸಾಧಿಸದ ಅಧಿಕಾರಿಗಳನ್ನು ಹೊಣೆಗಾರರಾಗಿ ಮಾಡಲಾಗುವುದು. ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆ ಆಗಲೇ ಬಾರದು. ಕರ ಸಮಾಧಾನ ಯೋಜನೆ ಅಡಿ ₹ 2 ಸಾವಿರ ಕೋಟಿ ಹೆಚ್ಚುವರಿ ಸಂಗ್ರಹದ ನಿರೀಕ್ಷೆಯಿದೆ’ ಎಂದರು.</p><p>ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಎ.ಶಿಖಾ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.</p>.<h2>ಅಬಕಾರಿ ಇಲಾಖೆ ತೆರಿಗೆ ಶೇ 52.53 ಗುರಿ ಸಾಧನೆ: </h2>.<p>‘ಅಬಕಾರಿ ಇಲಾಖೆಗೆ 2024-25ನೇ ಸಾಲಿಗೆ ಒಟ್ಟು ಗುರಿ ₹ 38,525 ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್ 28ರವರೆಗೆ ₹ 20,237 ಕೋಟಿ (ಶೇ 52.53) ಗುರಿ ಸಾಧನೆ ಮಾಡಲಾಗಿದೆ. ಮಾರ್ಚ್ ಒಳಗೆ ನಿಗದಿತ ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.</p><p>ಅಬಕಾರಿ ಇಲಾಖೆಯ ಪ್ರಗತಿಯ ಪರಿಶೀಲನೆಯನ್ನೂ ಮುಖ್ಯಮಂತ್ರಿ ನಡೆಸಿದರು. </p><p>ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ₹ 1301.15 ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹಿಸಲಾಗಿದೆ.</p><p>‘ಗೋವಾದಿಂದ ಅಕ್ರಮ ಮದ್ಯ ಸಾಗಣೆ ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದೂ ಮುಖ್ಯಮಂತ್ರಿ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>