ಆಡಳಿತದಲ್ಲಿ ಬಿಗಿ ಕಳೆದುಕೊಂಡ ಪರಿಣಾಮ ದುಷ್ಕರ್ಮಿಗಳ ಅಟ್ಟಹಾಸ ಮೇರೆ ಮೀರುತ್ತಿದೆ. ಇದರ ಮುಂದುವರೆದ ಭಾಗವಾಗಿಯೇ ಚೂರಿ ಇರಿತ ನಡೆದಿದೆ. ಮೂಲಭೂತವಾದಿ ಕಿಡಿಗೇಡಿಗಳು ಕಾಂಗ್ರೆಸ್ ಸರ್ಕಾರದ ಓಲೈಕೆ ನಿಲುವುಗಳಿಂದ ಕಾನೂನು ಕುಣಿಕೆಯ ಭಯವಿಲ್ಲದ ಕಾರಣದಿಂದಲೇ ದುಷ್ಕೃತ್ಯಗಳಲ್ಲಿ ತೊಡಗಿದ್ದಾರೆ. ಇವರನ್ನು ಶಿಕ್ಷೆಗೆ ಒಳಪಡಿಸದಿದ್ದರೆ ಹೋರಾಟದ ಮೂಲಕವೇ ಉತ್ತರ ಹೇಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.