‘ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡುವ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಶಿವರಾಮ ಹೆಬ್ಬಾರ್ ಟ್ವೀಟ್ ಮಾಡಿದ್ದರು. ಅವರ ಕಮೆಂಟ್ಗಳಲ್ಲಿ ಸತ್ಯಾಂಶ ಇಲ್ಲ. ನನ್ನ ಪ್ರತಿಷ್ಠೆ, ವೈಯಕ್ತಿಕ ಹಾಗೂ ವೃತ್ತಿಪರ ಖ್ಯಾತಿ ಹಾಳು ಮಾಡುವ ಉದ್ದೇಶ ಹೊಂದಿದೆ’ ಎಂದು ದೂರಿನಲ್ಲಿ ಚೇತನ್ ತಿಳಿಸಿದ್ದಾರೆ.