ನಟಿ, ನಿರ್ದೇಶಕಿ ರೂಪಾ ಅಯ್ಯರ್ ಮಾತನಾಡಿ, ‘ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ನೀರು ಒದಗಿಸುವ ಶಾಂತಿಸಾಗರ ಕೆರೆಯನ್ನು ಜೀರ್ಣೋದ್ಧಾರ ಮಾಡುವ ಅಗತ್ಯವಿದೆ. ಕೆರೆ, ಕಾಲುವೆಗಳ ಸಂರಕ್ಷಣೆಗೆ ನೇತೃತ್ವ ವಹಿಸುವಂತೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ವಿನಂತಿಸಿಕೊಂಡಿದ್ದೇವೆ’ ಎಂದು ಹೇಳಿದರು.