ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲೆಂದು ನಟ ಕಿಶೋರ್‌ ಶುಭ ಹಾರೈಕೆ

Last Updated 7 ಜನವರಿ 2023, 3:15 IST
ಅಕ್ಷರ ಗಾತ್ರ

ಬೆಂಗಳೂರು: ಹಾವೇರಿಯ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವಾಗಿ ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ ‘ಜನಸಾಹಿತ್ಯ ಸಮ್ಮೇಳನ’ಕ್ಕೆ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಶುಭ ಹಾರೈಸಿ ಬೆಂಬಲ ಸೂಚಿಸಿದ್ದಾರೆ.

ಹಾವೇರಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮುಸ್ಲಿಂ ಸಮುದಾಯ ಮತ್ತು ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂಬ ದೂರುಗಳಿವೆ. ಹೀಗಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿಯಾಗಿ ಬೆಂಗಳೂರಿನಲ್ಲಿ ಇದೇ 8ರಂದು ಜನ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಪ್ರಕಟಿಸಿರುವ ಕಿಶೋರ್‌ ಕುಮಾರ್‌, ‌ಜನಸಾಹಿತ್ಯ ಸಮ್ಮೇಳನ ಜನೋತ್ಸವವಾಗಿ ಯಶಸ್ವಿಯಾಗಲೆಂಬ ಹಾರೈಸುವುದಾಗಿ ಹೇಳಿದ್ದಾರೆ.

‘ಆಳುವ ಅರೆಮನೆಗೆ ಸೀಮಿತವಾಗಿದ್ದ ಸಾಹಿತ್ಯ, 12ನೇ ಶತಮಾನದ ವಚನಕಾರರ ಬಂಡಾಯದಿಂದ ಜನಸಾಹಿತ್ಯ ಕ್ರಾಂತಿಯಾದ ಹಾಗೆ, ಒಡೆದಾಳುವ ನಿರಂಕುಶ ಧರ್ಮಾಂಧ ರಾಜಕಾರಣದ ಸಂಕೋಲೆಯಿಂದ ಮುಕ್ತವಾಗಿ, ಕನ್ನಡ ನಾಡಿನ ಅಸ್ಮಿತೆಯ, ಸಾಂಸ್ಕೃತಿಕ ಜೀವಂತಿಕೆಯ, ಸೃಜನಶೀಲ ಜೀವಶಕ್ತಿಯ, ಜೀವ ಪ್ರೀತಿಯ ಸಂಕೇತವಾಗಿ, ಜನಸಾಹಿತ್ಯ ಸಮ್ಮೇಳನ ಜನೋತ್ಸವವಾಗಿ ಯಶಸ್ವಿಯಾಗಲೆಂಬ ಹಾರೈಕೆ’ ಎಂದು ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT