ಬೆಳಿಗ್ಗೆ 5.57ಕ್ಕೆ ಸರ್ವಜ್ಞ ಪೀಠಾರೋಹಣ: ಈಶಪ್ರಿಯ ತೀರ್ಥರು ಶನಿವಾರ ಬೆಳಗಿನ ಜಾವ 4.50ಕ್ಕೆ ಕನಕನ ಕಿಂಡಿಯಲ್ಲಿ ಕೃಷ್ಣನ ದರ್ಶನ ಮಾಡಲಿದ್ದು, 5.30ಕ್ಕೆ ಕೃಷ್ಣಮಠ ಪ್ರವೇಶಿಸಿ, 5.57ರ ಮುಹೂರ್ತದಲ್ಲಿ ಪರ್ಯಾಯ ಪಲಿಮಾರು ವಿದ್ಯಾಧೀಶ ಶ್ರೀಗಳಿಂದ ಅಕ್ಷಯ ಪಾತ್ರೆ, ಸುಟ್ಟುಗ, ಗರ್ಭಗುಡಿಯ ಕೀಲಿಕೆ ಪಡೆದು, ಪವಿತ್ರ ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ.