ಅದಾನಿ ಹಗರಣವನ್ನು ಮುಚ್ಚಿ ಹಾಕಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಜಂತರ್ ಮಂತರ್ನಿಂದ ಎಸ್ಬಿಐ ವರೆಗೆ ಸಾಗಿದರು. ಎಲ್ಐಸಿ, ಎಸ್ಬಿಐ ಉಳಿಸಿ ಎಂದು ಘೋಷಣೆ ಕೂಗಿದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ತಡೆದರು. ಕಾರ್ಯಕರ್ತರು ಬ್ಯಾರಿಕೇಡ್ಗಳನ್ನು ಹತ್ತಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದರು.