‘ಈ ಕುರಿತು ನಾನು ವಿವರವಾಗಿ ಸಿದ್ಧಪಡಿಸಿದ್ದ ಮನವಿಯನ್ನು ಈಚೆಗೆ ರಾಜ್ಯಸಭಾ ಸದಸ್ಯರಾಗಿರುವ ವೀರೇಂದ್ರ ಹೆಗ್ಗಡೆ ಅವರ ಮೂಲಕ ಪ್ರಧಾನಿಯವರಿಗೆ ಸಲ್ಲಿಸಲಾಗಿತ್ತು. ತುಳು ಗೊತ್ತಿರುವ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಡಿ.ವಿ. ಸದಾನಂದ ಗೌಡ ಹಾಗೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಈ ಕುರಿತು ಪ್ರಧಾನಿ ಜೊತೆ ಮಾತಾಡಬೇಕು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಈ ಬಗ್ಗೆ ಮನವಿ ಸಲ್ಲಿಸಬೇಕು. ಸಾರ್ವಜನಿಕರು ಪ್ರಧಾನಿಯ ಗಮನ ಸೆಳೆಯಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.