ವಿಧಾನಸಭಾ ಸದಸ್ಯರಾಗಿರುವ ಬಸವರಾಜ ರಾಯರಡ್ಡಿ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾಗಿ, ಬಿ.ಆರ್. ಪಾಟೀಲ ಮುಖ್ಯಮಂತ್ರಿಯವರ ಸಲಹೆಗಾರರಾಗಿ ಮತ್ತು ಆರ್.ವಿ. ದೇಶಪಾಂಡೆ ಅವರು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಮೂವರನ್ನೂ ಲಾಭದಾಯಕ ಹುದ್ದೆ ವ್ಯಾಪ್ತಿಯಿಂದ ಹೊರಗಿಟ್ಟು, ರಕ್ಷಿಸುವುದಕ್ಕೆ ತಿದ್ದುಪಡಿ ಮಸೂದೆ ರೂಪಿಸಲಾಗಿದೆ.