ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿ ಪ್ರಕರಣ: ರಮೇಶ ಜಾರಕಿಹೊಳಿ ವಿರುದ್ಧ ಕಮಿಷನರ್‌ಗೆ ದೂರು ನೀಡಿದ ವಕೀಲ‌ ಜಗದೀಶ್

Last Updated 26 ಮಾರ್ಚ್ 2021, 8:56 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶುಕ್ರವಾರ ಮಧ್ಯಾಹ್ನವೇ ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಲಾಗುವುದು ಎಂದು ಯುವತಿ ವಕೀಲರಾದ ಕೆ.ಎನ್. ಜಗದೀಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರದಲ್ಲಿ‌ ಮಾತನಾಡಿರುವ ಜಗದೀಶ್ ಕುಮಾರ್, ‘ಯುವತಿ ತಮ್ಮ ಕೈಯಿಂದ ಬರೆದಿರುವ ದೂರಿನ ಪ್ರತಿಯನ್ನು ನಮಗೆ ತಲುಪಿಸಿದ್ದಾರೆ. ಇದನ್ನೇ ಕಮಿಷನರ್ ಅವರಿಗೆ ನೀಡಿ, ಮುಂದಿನ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗುವುದು’ ಎಂದಿದ್ದಾರೆ.

‘ಯುವತಿಗೆ ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆ ಇದೆ. ಅವರಿಗೆ ಸೂಕ್ತ ಭದ್ರತೆ ನೀಡಬೇಕು. ನಂತರವೇ ಯುವತಿ, ಕಮಿಷನರ್ ಎದುರು ಹಾಜರಾಗಿ ಹೇಳಿಕೆ ನೀಡಲಿದ್ದಾರೆ’ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT