<p><strong>ಬೆಂಗಳೂರು:</strong> ‘ಕೋರ್ಟ್ ಆವರಣದಲ್ಲಿ ಸಾಹಿತಿ ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ ಅವರು ವೃತ್ತಿ ದುರ್ನಡತೆ ತೋರಿದ್ದು, ವಕೀಲರ ಶಿಷ್ಟಾಚಾರಗಳಿಗೆ ಅವಮಾನ ಉಂಟು ಮಾಡಿದ್ದಾರೆ. ಈ ಕಾರಣಕ್ಕಾಗಿ ಅವರು ಮೂರು ತಿಂಗಳ ಕಾಲ ದೇಶದ ಯಾವುದೇ ಕೋರ್ಟ್ಗಳಲ್ಲಿ ವಕೀಲಿಕೆ ನಡೆಸಬಾರದು’ ಎಂದು ರಾಜ್ಯ ವಕೀಲರ ಪರಿಷತ್ ಆದೇಶಿಸಿದೆ. </p>.<p>ಈ ಸಂಬಂಧ ಕೆ.ಎಸ್.ಭಗವಾನ್ ದಾಖಲಿಸಿದ್ದ ದೂರನ್ನು; ರಾಜ್ಯ ವಕೀಲರ ಪರಿಷತ್ತಿನ, ‘ಶಿಸ್ತುಪಾಲನಾ ಸಮಿತಿ’ ಅಧ್ಯಕ್ಷ ಎಸ್.ಮಹೇಶ್ ಮತ್ತು ಪರಿಷತ್ ಸದಸ್ಯ ಎಸ್.ಹರೀಶ್ ನೇತೃತ್ವದ ಸಮಿತಿ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.</p>.<p>‘ವಕೀಲೆಯಾಗಿ ಸಮವಸ್ತ್ರ ಧಾರಿಣಿಯಾಗಿದ್ದ ಮೀರಾ, ಕ್ರಿಮಿನಲ್ ಪ್ರಕರಣವೊಂದರ ಆರೋಪಿಯಾದ ಕೆ.ಎಸ್.ಭಗವಾನ್ ಅವರಿಗೆ ಕೋರ್ಟಿನ ಆವರಣದಲ್ಲಿ ಅವರ ಮುಖಕ್ಕೆ ಮಸಿ ಬಳಿಯುವ ಮೂಲಕ ದುರ್ನಡತೆ ತೋರಿದ್ದಾರೆ. ವೃತ್ತಿಗೆ ಬದ್ಧರಾಗಿರದೆ ಶಿಷ್ಟಾಚಾರಗಳಿಗೆ ಅಪಮಾನ ಉಂಟು ಮಾಡಿದ್ದಾರೆ. ಹೀಗಾಗಿ, ಅವರು ಮೂರು ತಿಂಗಳ ಕಾಲ ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ ಯಾವುದೇ ಕೋರ್ಟ್ಗಳಲ್ಲಿ ವಕೀಲಿಕೆ ನಡೆಸಬಾರದು ಮತ್ತು ವಕಾಲತ್ತು ಸಲ್ಲಿಸಬಾರದು. ಅಲ್ಲಿಯವರೆಗೆ ಅವರ ಸನ್ನದನ್ನು ಅಮಾನತಿನಲ್ಲಿ ಇರಿಸಲಾಗಿದೆ’ ಎಂದು ಸಮಿತಿಯು ತನ್ನ ಆದೇಶದಲ್ಲಿ ವಿವರಿಸಿದೆ.</p>.<p>‘ವಕೀಲೆ ಮೀರಾ ರಾಘವೇಂದ್ರ ಅಲಿಯಾಸ್ ಆರ್.ಮೀರಾ ರಾಘವೇಂದ್ರ, ವೃತ್ತಿಪರ ವಕೀಲೆಯಾಗಿ ದೂರಿನ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಪರಿಷತ್ ನೀಡಿದ ನೋಟಿಸ್ ಅನ್ನೂ ಸ್ವೀಕರಿಸದೆ ವಕೀಲರ ಪರಿಷತ್ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ’ ಎಂದು ಸಮಿತಿಯು ಮೀರಾ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದೆ.</p>.<p><strong>ಪ್ರಕರಣವೇನು</strong>?: ‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ಲೇಖಕ ಕೆ.ಎಸ್.ಭಗವಾನ್ ‘ಶ್ರೀರಾಮನನ್ನು ಹೀಯಾಳಿಸಿದ್ದಾರೆ. ಅವಹೇಳನಕಾರಿ ಪದಗಳ ಬಳಕೆ ಮಾಡಿದ್ದಾರೆ. ಈ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ವಕೀಲೆ ಮೀರಾ ರಾಘವೇಂದ್ರ ಅವರು ಕೆ.ಎಸ್.ಭಗವಾನ್ ವಿರುದ್ಧ 2ನೇ ಎಸಿಎಂಎಂ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. </p>.<p>‘ಪ್ರಕರಣದ ಆರೋಪಿಯಾಗಿ 2021ರ ಫೆಬ್ರುವರಿ 4ರಂದು ಕೋರ್ಟ್ಗೆ ಹಾಜರಾಗಿ ಷರತ್ತುಬದ್ಧ ಜಾಮೀನು ಪಡೆದು ಹೊರಬರುತ್ತಿದ್ದ ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮೀರಾ ರಾಘವೇಂದ್ರ ಮಸಿ ಬಳಿದಿದ್ದರು ಮತ್ತು ಎಂ.ಎಂ.ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಅವರಂತೆ ನಿಮ್ಮನ್ನೂ ಹತ್ಯೆ ಮಾಡಲಾಗುವುದು ಎಂದು ಜೀವ ಬೆದರಿಕೆ ಹಾಕಿದ್ದಾರೆ’ ಎಂಬ ಆರೋಪವನ್ನು ಮೀರಾ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮೀರಾ ಅವರು ತಮ್ಮ ಮುಖಕ್ಕೆ ಮಸಿ ಬಳಿದಿದ್ದ ನಡವಳಿಕೆಯನ್ನು ಆಕ್ಷೇಪಿಸಿ ಭಗವಾನ್ ಅವರು ರಾಜ್ಯ ವಕೀಲರ ಪರಿಷತ್ನಲ್ಲಿ ದೂರು ದಾಖಲಿಸಿದ್ದರು.</p>.<p><strong>ಮತ್ತೊಂದು ಪ್ರಕರಣ</strong>: ‘ಧರ್ಮ–ಧರ್ಮಗಳ ಮಧ್ಯೆ ಸಂಘರ್ಷ ಏರ್ಪಡಿಸುವಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ’ (ಈ ಅಪರಾಧಕ್ಕೆ ಮೂರು ವರ್ಷಗಳ ಜೈಲು ಶಿಕ್ಷೆ) ಎಂದು ಆರೋಪಿಸಿ ಹೈಕೋರ್ಟ್ ವಕೀಲ ಗಿರೀಶ್ ಭಾರದ್ವಾಜ್ ಅವರು ಕೆ.ಎಸ್.ಭಗವಾನ್ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 295ಎ ಅಡಿಯಲ್ಲಿ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವೊಂದನ್ನು 44ನೇ ಎಸಿಎಂಎಂ ಕೋರ್ಟ್ ಇತ್ತೀಚೆಗಷ್ಟೇ ವಜಾಗೊಳಿಸಿದೆ. ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರು ಭಗವಾನ್ ಪರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋರ್ಟ್ ಆವರಣದಲ್ಲಿ ಸಾಹಿತಿ ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ ಅವರು ವೃತ್ತಿ ದುರ್ನಡತೆ ತೋರಿದ್ದು, ವಕೀಲರ ಶಿಷ್ಟಾಚಾರಗಳಿಗೆ ಅವಮಾನ ಉಂಟು ಮಾಡಿದ್ದಾರೆ. ಈ ಕಾರಣಕ್ಕಾಗಿ ಅವರು ಮೂರು ತಿಂಗಳ ಕಾಲ ದೇಶದ ಯಾವುದೇ ಕೋರ್ಟ್ಗಳಲ್ಲಿ ವಕೀಲಿಕೆ ನಡೆಸಬಾರದು’ ಎಂದು ರಾಜ್ಯ ವಕೀಲರ ಪರಿಷತ್ ಆದೇಶಿಸಿದೆ. </p>.<p>ಈ ಸಂಬಂಧ ಕೆ.ಎಸ್.ಭಗವಾನ್ ದಾಖಲಿಸಿದ್ದ ದೂರನ್ನು; ರಾಜ್ಯ ವಕೀಲರ ಪರಿಷತ್ತಿನ, ‘ಶಿಸ್ತುಪಾಲನಾ ಸಮಿತಿ’ ಅಧ್ಯಕ್ಷ ಎಸ್.ಮಹೇಶ್ ಮತ್ತು ಪರಿಷತ್ ಸದಸ್ಯ ಎಸ್.ಹರೀಶ್ ನೇತೃತ್ವದ ಸಮಿತಿ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.</p>.<p>‘ವಕೀಲೆಯಾಗಿ ಸಮವಸ್ತ್ರ ಧಾರಿಣಿಯಾಗಿದ್ದ ಮೀರಾ, ಕ್ರಿಮಿನಲ್ ಪ್ರಕರಣವೊಂದರ ಆರೋಪಿಯಾದ ಕೆ.ಎಸ್.ಭಗವಾನ್ ಅವರಿಗೆ ಕೋರ್ಟಿನ ಆವರಣದಲ್ಲಿ ಅವರ ಮುಖಕ್ಕೆ ಮಸಿ ಬಳಿಯುವ ಮೂಲಕ ದುರ್ನಡತೆ ತೋರಿದ್ದಾರೆ. ವೃತ್ತಿಗೆ ಬದ್ಧರಾಗಿರದೆ ಶಿಷ್ಟಾಚಾರಗಳಿಗೆ ಅಪಮಾನ ಉಂಟು ಮಾಡಿದ್ದಾರೆ. ಹೀಗಾಗಿ, ಅವರು ಮೂರು ತಿಂಗಳ ಕಾಲ ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ ಯಾವುದೇ ಕೋರ್ಟ್ಗಳಲ್ಲಿ ವಕೀಲಿಕೆ ನಡೆಸಬಾರದು ಮತ್ತು ವಕಾಲತ್ತು ಸಲ್ಲಿಸಬಾರದು. ಅಲ್ಲಿಯವರೆಗೆ ಅವರ ಸನ್ನದನ್ನು ಅಮಾನತಿನಲ್ಲಿ ಇರಿಸಲಾಗಿದೆ’ ಎಂದು ಸಮಿತಿಯು ತನ್ನ ಆದೇಶದಲ್ಲಿ ವಿವರಿಸಿದೆ.</p>.<p>‘ವಕೀಲೆ ಮೀರಾ ರಾಘವೇಂದ್ರ ಅಲಿಯಾಸ್ ಆರ್.ಮೀರಾ ರಾಘವೇಂದ್ರ, ವೃತ್ತಿಪರ ವಕೀಲೆಯಾಗಿ ದೂರಿನ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಪರಿಷತ್ ನೀಡಿದ ನೋಟಿಸ್ ಅನ್ನೂ ಸ್ವೀಕರಿಸದೆ ವಕೀಲರ ಪರಿಷತ್ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ’ ಎಂದು ಸಮಿತಿಯು ಮೀರಾ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದೆ.</p>.<p><strong>ಪ್ರಕರಣವೇನು</strong>?: ‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ಲೇಖಕ ಕೆ.ಎಸ್.ಭಗವಾನ್ ‘ಶ್ರೀರಾಮನನ್ನು ಹೀಯಾಳಿಸಿದ್ದಾರೆ. ಅವಹೇಳನಕಾರಿ ಪದಗಳ ಬಳಕೆ ಮಾಡಿದ್ದಾರೆ. ಈ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ವಕೀಲೆ ಮೀರಾ ರಾಘವೇಂದ್ರ ಅವರು ಕೆ.ಎಸ್.ಭಗವಾನ್ ವಿರುದ್ಧ 2ನೇ ಎಸಿಎಂಎಂ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. </p>.<p>‘ಪ್ರಕರಣದ ಆರೋಪಿಯಾಗಿ 2021ರ ಫೆಬ್ರುವರಿ 4ರಂದು ಕೋರ್ಟ್ಗೆ ಹಾಜರಾಗಿ ಷರತ್ತುಬದ್ಧ ಜಾಮೀನು ಪಡೆದು ಹೊರಬರುತ್ತಿದ್ದ ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮೀರಾ ರಾಘವೇಂದ್ರ ಮಸಿ ಬಳಿದಿದ್ದರು ಮತ್ತು ಎಂ.ಎಂ.ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಅವರಂತೆ ನಿಮ್ಮನ್ನೂ ಹತ್ಯೆ ಮಾಡಲಾಗುವುದು ಎಂದು ಜೀವ ಬೆದರಿಕೆ ಹಾಕಿದ್ದಾರೆ’ ಎಂಬ ಆರೋಪವನ್ನು ಮೀರಾ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮೀರಾ ಅವರು ತಮ್ಮ ಮುಖಕ್ಕೆ ಮಸಿ ಬಳಿದಿದ್ದ ನಡವಳಿಕೆಯನ್ನು ಆಕ್ಷೇಪಿಸಿ ಭಗವಾನ್ ಅವರು ರಾಜ್ಯ ವಕೀಲರ ಪರಿಷತ್ನಲ್ಲಿ ದೂರು ದಾಖಲಿಸಿದ್ದರು.</p>.<p><strong>ಮತ್ತೊಂದು ಪ್ರಕರಣ</strong>: ‘ಧರ್ಮ–ಧರ್ಮಗಳ ಮಧ್ಯೆ ಸಂಘರ್ಷ ಏರ್ಪಡಿಸುವಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ’ (ಈ ಅಪರಾಧಕ್ಕೆ ಮೂರು ವರ್ಷಗಳ ಜೈಲು ಶಿಕ್ಷೆ) ಎಂದು ಆರೋಪಿಸಿ ಹೈಕೋರ್ಟ್ ವಕೀಲ ಗಿರೀಶ್ ಭಾರದ್ವಾಜ್ ಅವರು ಕೆ.ಎಸ್.ಭಗವಾನ್ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 295ಎ ಅಡಿಯಲ್ಲಿ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವೊಂದನ್ನು 44ನೇ ಎಸಿಎಂಎಂ ಕೋರ್ಟ್ ಇತ್ತೀಚೆಗಷ್ಟೇ ವಜಾಗೊಳಿಸಿದೆ. ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರು ಭಗವಾನ್ ಪರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>