<p><strong>ಬೆಂಗಳೂರು</strong>: ‘ವಕೀಲರ ಹಿತರಕ್ಷಣೆಗಾಗಿ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿಯೇ ಮಸೂದೆ ಮಂಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ವಕೀಲ ವಾಹಿನಿ ಬಳಗದ ‘ವಕೀಲ ವಾಹಿನಿ’ ದ್ವಿಭಾಷಾ ಮಾಸ ಪತ್ರಿಕೆಯನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ‘ಬೆಂಗಳೂರು ವಕೀಲರ ಸಂಘದ ಆಶಯದಂತೆ ಈ ಕಾಯ್ದೆ ತರಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಅಲ್ಲದೆ, ಬೆಂಗಳೂರು ವಕೀಲರ ಸಂಘ ಹೈಕೋರ್ಟ್ನಲ್ಲಿ ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಮೇಲೆ ಮುಖ್ಯ ನ್ಯಾಯಮೂರ್ತಿ ನೀಡಿರುವ ನಿರ್ದೇಶನದಂತೆ ವಕೀಲರಿಗೆ ಆರೋಗ್ಯ ವಿಮೆ ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರದಲ್ಲಿ ಆರೋಗ್ಯ ವಿಮೆ ಜಾರಿಗೊಳಿಸಲಾಗುವುದು’ ಎಂದರು.</p>.<p>‘ರಾಜ್ಯ ಸರ್ಕಾರ ರೂಪಿಸುವ ಕಾಯ್ದೆಗಳಲ್ಲಿರುವ ಸಣ್ಣಪುಟ್ಟ ಲೋಪಗಳಿಗೆ ತಿದ್ದುಪಡಿ ತರುವ ಅಗತ್ಯವಿದೆ. ಅದಕ್ಕೆ ನಿಮ್ಮಲ್ಲರ ಸಹಾಯ ಬೇಕಾಗಿದೆ’ ಎಂದು ಹಿರಿಯ ವಕೀಲರಿಗೆ ಬೊಮ್ಮಾಯಿ ಹೇಳಿದರು.</p>.<p>‘ವಕೀಲರು ಜನರ ಧ್ವನಿಯಾಗಿ ಕೆಲಸ ಮಾಡುವವರು. ನೀವು ಹೊರತರುವ ‘ವಕೀಲ ವಾಹಿನಿ’ ಮಾಸ ಪತ್ರಿಕೆ ಯಶಸ್ಸು ಕಾಣಲಿದೆ’ ಎಂದೂ ಮುಖ್ಯಮಂತ್ರಿ ಆಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಕೀಲರ ಹಿತರಕ್ಷಣೆಗಾಗಿ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿಯೇ ಮಸೂದೆ ಮಂಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ವಕೀಲ ವಾಹಿನಿ ಬಳಗದ ‘ವಕೀಲ ವಾಹಿನಿ’ ದ್ವಿಭಾಷಾ ಮಾಸ ಪತ್ರಿಕೆಯನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ‘ಬೆಂಗಳೂರು ವಕೀಲರ ಸಂಘದ ಆಶಯದಂತೆ ಈ ಕಾಯ್ದೆ ತರಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಅಲ್ಲದೆ, ಬೆಂಗಳೂರು ವಕೀಲರ ಸಂಘ ಹೈಕೋರ್ಟ್ನಲ್ಲಿ ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಮೇಲೆ ಮುಖ್ಯ ನ್ಯಾಯಮೂರ್ತಿ ನೀಡಿರುವ ನಿರ್ದೇಶನದಂತೆ ವಕೀಲರಿಗೆ ಆರೋಗ್ಯ ವಿಮೆ ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರದಲ್ಲಿ ಆರೋಗ್ಯ ವಿಮೆ ಜಾರಿಗೊಳಿಸಲಾಗುವುದು’ ಎಂದರು.</p>.<p>‘ರಾಜ್ಯ ಸರ್ಕಾರ ರೂಪಿಸುವ ಕಾಯ್ದೆಗಳಲ್ಲಿರುವ ಸಣ್ಣಪುಟ್ಟ ಲೋಪಗಳಿಗೆ ತಿದ್ದುಪಡಿ ತರುವ ಅಗತ್ಯವಿದೆ. ಅದಕ್ಕೆ ನಿಮ್ಮಲ್ಲರ ಸಹಾಯ ಬೇಕಾಗಿದೆ’ ಎಂದು ಹಿರಿಯ ವಕೀಲರಿಗೆ ಬೊಮ್ಮಾಯಿ ಹೇಳಿದರು.</p>.<p>‘ವಕೀಲರು ಜನರ ಧ್ವನಿಯಾಗಿ ಕೆಲಸ ಮಾಡುವವರು. ನೀವು ಹೊರತರುವ ‘ವಕೀಲ ವಾಹಿನಿ’ ಮಾಸ ಪತ್ರಿಕೆ ಯಶಸ್ಸು ಕಾಣಲಿದೆ’ ಎಂದೂ ಮುಖ್ಯಮಂತ್ರಿ ಆಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>