<p><strong>ಬೆಂಗಳೂರು:</strong> ನಷ್ಟದಲ್ಲಿರುವ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ರಾಜ್ಯ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ನೀಡಿದೆ.</p>.<p>ಕೇರಳ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸಂಪರ್ಕಿಸುವ ಕೊಂಕಣ ರೈಲ್ವೆಯನ್ನು ಲಾಭಕ್ಕೆ ತರಲು ಸಾಧ್ಯವಾಗದೇ, ಆಧುನೀಕರಣ ಕಾರ್ಯವೂ ಸಾಧ್ಯವಾಗದೇ ಏಗುತ್ತಾ ಸಾಗುತ್ತಿರುವುದರಿಂದ ವಿಲೀನಕ್ಕೆ ಕೊಂಕಣ ರೈಲ್ವೆ ನಿಗಮವೂ ಸಜ್ಜಾಗಿದೆ. ಕೊಂಕಣ ರೈಲ್ವೆ ನಿಗಮದಲ್ಲಿ ಕರ್ನಾಟಕ ಸರ್ಕಾರ ಶೇ 11.62 ರಷ್ಟು ಈಕ್ವಿಟಿ ಷೇರು (₹270 ಕೋಟಿ) ಹೊಂದಿದೆ. </p>.<p>ಕೊಂಕಣ ರೈಲ್ವೆ ನಿಗಮ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಮುಂದಿನ 15 ವರ್ಷಗಳಿಗೆ ₹9,158 ಕೋಟಿ ಅಗತ್ಯವಿದೆ. ಇದಕ್ಕೆ ಕರ್ನಾಟಕ ತನ್ನ ಪಾಲನ್ನು ನೀಡಬೇಕು. ತನ್ನ ಪಾಲು ಹೂಡಿಕೆ ಮಾಡಲು ಸಾಧ್ಯವಾಗದೇ ಇದ್ದರೆ, ಷೇರುಗಳನ್ನು ಭಾರತೀಯ ರೈಲ್ವೆ ಮಂತ್ರಾಲಯಕ್ಕೆ ಬಿಟ್ಟುಕೊಡುವ ಬಗ್ಗೆ ಪರಿಶೀಲನೆ ನಡೆಸಬಹುದು ಎಂದು ಕೊಂಕಣ ರೈಲ್ವೆ ನಿಗಮವು ಕರ್ನಾಟಕ ಸರ್ಕಾರಕ್ಕೆ ತಿಳಿಸಿದೆ.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯದ ಹಣಕಾಸು ಇಲಾಖೆ, ನಿಗಮದಿಂದ ಈಕ್ವಿಟಿ ಷೇರುಗಳ ಹಿಂಪಡೆಯುವಿಕೆ, ನಿಗಮದಿಂದ ಹೊರಬರಲು ಇರುವ ಉತ್ತಮ ಆಯ್ಕೆಗಳು ಹಾಗೂ ಇದಕ್ಕಾಗಿ ನಡೆಸಬೇಕಾದ ಮೌಲ್ಯಮಾಪನ ವಿಧಾನದ ಬಗ್ಗೆ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಕೊಂಕಣ ರೈಲ್ವೆ ನಿಗಮಕ್ಕೆ ಪತ್ರ ಬರೆಯಬೇಕು ಎಂದು ಸೂಚಿಸಿದೆ.</p>.<p>ಕೊಂಕಣ ರೈಲ್ವೆ ನಿಗಮದಿಂದ ಹೊರಬರುವ ಮತ್ತು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ವಿಚಾರವಾಗಿ ಪ್ರಸ್ತಾವನೆ ಸಲ್ಲಿಸುವಂತೆ ಕೋರಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಇತ್ತೀಚೆಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದರು.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್, ‘ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಸಂಬಂಧ ಗೋವಾ ರಾಜ್ಯ ಒಪ್ಪಿಗೆ ನೀಡಿದೆ. ನಾವು ಕೂಡ ವಿಲೀನಕ್ಕೆ ಇರುವ ಅಡೆ ತಡೆಗಳನ್ನು ನಿವಾರಿಸಬೇಕು. ಆಧುನೀಕರಣದ ಜತೆ ಹೊಸ ರೈಲುಗಳನ್ನು ಆರಂಭಿಸಿದರೆ ಉತ್ತಮ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಷ್ಟದಲ್ಲಿರುವ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ರಾಜ್ಯ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ನೀಡಿದೆ.</p>.<p>ಕೇರಳ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸಂಪರ್ಕಿಸುವ ಕೊಂಕಣ ರೈಲ್ವೆಯನ್ನು ಲಾಭಕ್ಕೆ ತರಲು ಸಾಧ್ಯವಾಗದೇ, ಆಧುನೀಕರಣ ಕಾರ್ಯವೂ ಸಾಧ್ಯವಾಗದೇ ಏಗುತ್ತಾ ಸಾಗುತ್ತಿರುವುದರಿಂದ ವಿಲೀನಕ್ಕೆ ಕೊಂಕಣ ರೈಲ್ವೆ ನಿಗಮವೂ ಸಜ್ಜಾಗಿದೆ. ಕೊಂಕಣ ರೈಲ್ವೆ ನಿಗಮದಲ್ಲಿ ಕರ್ನಾಟಕ ಸರ್ಕಾರ ಶೇ 11.62 ರಷ್ಟು ಈಕ್ವಿಟಿ ಷೇರು (₹270 ಕೋಟಿ) ಹೊಂದಿದೆ. </p>.<p>ಕೊಂಕಣ ರೈಲ್ವೆ ನಿಗಮ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಮುಂದಿನ 15 ವರ್ಷಗಳಿಗೆ ₹9,158 ಕೋಟಿ ಅಗತ್ಯವಿದೆ. ಇದಕ್ಕೆ ಕರ್ನಾಟಕ ತನ್ನ ಪಾಲನ್ನು ನೀಡಬೇಕು. ತನ್ನ ಪಾಲು ಹೂಡಿಕೆ ಮಾಡಲು ಸಾಧ್ಯವಾಗದೇ ಇದ್ದರೆ, ಷೇರುಗಳನ್ನು ಭಾರತೀಯ ರೈಲ್ವೆ ಮಂತ್ರಾಲಯಕ್ಕೆ ಬಿಟ್ಟುಕೊಡುವ ಬಗ್ಗೆ ಪರಿಶೀಲನೆ ನಡೆಸಬಹುದು ಎಂದು ಕೊಂಕಣ ರೈಲ್ವೆ ನಿಗಮವು ಕರ್ನಾಟಕ ಸರ್ಕಾರಕ್ಕೆ ತಿಳಿಸಿದೆ.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯದ ಹಣಕಾಸು ಇಲಾಖೆ, ನಿಗಮದಿಂದ ಈಕ್ವಿಟಿ ಷೇರುಗಳ ಹಿಂಪಡೆಯುವಿಕೆ, ನಿಗಮದಿಂದ ಹೊರಬರಲು ಇರುವ ಉತ್ತಮ ಆಯ್ಕೆಗಳು ಹಾಗೂ ಇದಕ್ಕಾಗಿ ನಡೆಸಬೇಕಾದ ಮೌಲ್ಯಮಾಪನ ವಿಧಾನದ ಬಗ್ಗೆ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಕೊಂಕಣ ರೈಲ್ವೆ ನಿಗಮಕ್ಕೆ ಪತ್ರ ಬರೆಯಬೇಕು ಎಂದು ಸೂಚಿಸಿದೆ.</p>.<p>ಕೊಂಕಣ ರೈಲ್ವೆ ನಿಗಮದಿಂದ ಹೊರಬರುವ ಮತ್ತು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ವಿಚಾರವಾಗಿ ಪ್ರಸ್ತಾವನೆ ಸಲ್ಲಿಸುವಂತೆ ಕೋರಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಇತ್ತೀಚೆಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದರು.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್, ‘ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಸಂಬಂಧ ಗೋವಾ ರಾಜ್ಯ ಒಪ್ಪಿಗೆ ನೀಡಿದೆ. ನಾವು ಕೂಡ ವಿಲೀನಕ್ಕೆ ಇರುವ ಅಡೆ ತಡೆಗಳನ್ನು ನಿವಾರಿಸಬೇಕು. ಆಧುನೀಕರಣದ ಜತೆ ಹೊಸ ರೈಲುಗಳನ್ನು ಆರಂಭಿಸಿದರೆ ಉತ್ತಮ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>