<p>ಬೆಂಗಳೂರು: ಹಲವು ರಾಜ್ಯಗಳಿಗೆ ವ್ಯಾಪಿಸಿರುವ ಅಗ್ರಿ ಗೋಲ್ಡ್ ಬಹುಕೋಟಿ ಹಗರಣದ ಸಂಬಂಧ ಕೆಲ ನಿರ್ದೇಶನ ಗಳನ್ನು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.</p>.<p>ಠೇವಣಿದಾರರ ಪರವಾಗಿ ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.</p>.<p>ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ಕೆಪಿಐಡಿ) ಕಾಯ್ದೆಯಡಿ ರಚನೆಯಾಗಿರುವ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥ ಹರ್ಷಗುಪ್ತ ಅವರುವಿಡಿಯೊ ಕಾನ್ಫರೆನ್ಸ್ ಮೂಲಕ ಬುಧವಾರ ವಿಚಾರಣೆಗೆ ಹಾಜರಾಗಿದ್ದರು.</p>.<p>‘ಐದು ರಾಜ್ಯಗಳಲ್ಲಿ ಈ ಕಂಪನಿಯ ಹೂಡಿಕೆದಾರರಿದ್ದಾರೆ. ಆಯಾ ರಾಜ್ಯ ಸರ್ಕಾರಗಳು ಮತ್ತು ಅಲ್ಲಿನ ನ್ಯಾಯಾಲಯಗಳು ವಿಭಿನ್ನ ರೀತಿಯಲ್ಲಿ ಆದೇಶ ಹೊರಡಿಸುತ್ತಿವೆ. ಕರ್ನಾಟಕದಲ್ಲಿದ್ದ ಅಗ್ರಿ ಗೋಲ್ಡ್ ಕಂಪನಿಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ’ ಎಂದು ಅವರು ವಿವರಿಸಿದರು.</p>.<p>‘ಹೀಗಾಗಿ, ಪ್ರಕರಣದಲ್ಲಿ ಒಮ್ಮತದ ತನಿಖೆ ನಡೆಸಲು ಯಾವುದಾದರೊಂದು ಸರ್ಕಾರವನ್ನು ನೋಡಲ್ ಆಗಿ ನೇಮಿಸುವ ಅಗತ್ಯವಿದೆ. ಈ ಸಂಬಂಧ ನಿರ್ದೇಶನ ನೀಡಲು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.</p>.<p>ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಹೊರಡಿಸಿರುವ ಆದೇಶಗಳ ಪ್ರತಿಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದ ನ್ಯಾಯಪೀಠವು, ವಿಚಾರಣೆಯನ್ನು ಜುಲೈ 6ಕ್ಕೆ ಮುಂದೂಡಿತು.</p>.<p>ಅಗ್ರಿ ಗೋಲ್ಡ್ ಕಂಪನಿಯ ಒಟ್ಟು 32 ಲಕ್ಷ ಹೂಡಿಕೆದಾರರಲ್ಲಿ 8.50 ಲಕ್ಷ ಮಂದಿ ಕರ್ನಾಟಕದ ವಿವಿಧ ಶಾಖೆಗಳಲ್ಲಿ ಹೂಡಿಕೆ ಮಾಡಿದವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಹಲವು ರಾಜ್ಯಗಳಿಗೆ ವ್ಯಾಪಿಸಿರುವ ಅಗ್ರಿ ಗೋಲ್ಡ್ ಬಹುಕೋಟಿ ಹಗರಣದ ಸಂಬಂಧ ಕೆಲ ನಿರ್ದೇಶನ ಗಳನ್ನು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.</p>.<p>ಠೇವಣಿದಾರರ ಪರವಾಗಿ ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.</p>.<p>ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ಕೆಪಿಐಡಿ) ಕಾಯ್ದೆಯಡಿ ರಚನೆಯಾಗಿರುವ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥ ಹರ್ಷಗುಪ್ತ ಅವರುವಿಡಿಯೊ ಕಾನ್ಫರೆನ್ಸ್ ಮೂಲಕ ಬುಧವಾರ ವಿಚಾರಣೆಗೆ ಹಾಜರಾಗಿದ್ದರು.</p>.<p>‘ಐದು ರಾಜ್ಯಗಳಲ್ಲಿ ಈ ಕಂಪನಿಯ ಹೂಡಿಕೆದಾರರಿದ್ದಾರೆ. ಆಯಾ ರಾಜ್ಯ ಸರ್ಕಾರಗಳು ಮತ್ತು ಅಲ್ಲಿನ ನ್ಯಾಯಾಲಯಗಳು ವಿಭಿನ್ನ ರೀತಿಯಲ್ಲಿ ಆದೇಶ ಹೊರಡಿಸುತ್ತಿವೆ. ಕರ್ನಾಟಕದಲ್ಲಿದ್ದ ಅಗ್ರಿ ಗೋಲ್ಡ್ ಕಂಪನಿಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ’ ಎಂದು ಅವರು ವಿವರಿಸಿದರು.</p>.<p>‘ಹೀಗಾಗಿ, ಪ್ರಕರಣದಲ್ಲಿ ಒಮ್ಮತದ ತನಿಖೆ ನಡೆಸಲು ಯಾವುದಾದರೊಂದು ಸರ್ಕಾರವನ್ನು ನೋಡಲ್ ಆಗಿ ನೇಮಿಸುವ ಅಗತ್ಯವಿದೆ. ಈ ಸಂಬಂಧ ನಿರ್ದೇಶನ ನೀಡಲು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.</p>.<p>ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಹೊರಡಿಸಿರುವ ಆದೇಶಗಳ ಪ್ರತಿಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದ ನ್ಯಾಯಪೀಠವು, ವಿಚಾರಣೆಯನ್ನು ಜುಲೈ 6ಕ್ಕೆ ಮುಂದೂಡಿತು.</p>.<p>ಅಗ್ರಿ ಗೋಲ್ಡ್ ಕಂಪನಿಯ ಒಟ್ಟು 32 ಲಕ್ಷ ಹೂಡಿಕೆದಾರರಲ್ಲಿ 8.50 ಲಕ್ಷ ಮಂದಿ ಕರ್ನಾಟಕದ ವಿವಿಧ ಶಾಖೆಗಳಲ್ಲಿ ಹೂಡಿಕೆ ಮಾಡಿದವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>