ಎನ್ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಲು ಬುಧವಾರ ರಾಷ್ಟ್ರ ರಾಜಧಾನಿಗೆ ಬಂದಿರುವ ಅವರು ಸುದ್ದಿಗಾರರ ಜತೆಗೆ ಮಾತನಾಡಿ, ‘ಮೊದಲಿನಿಂದಲೂ ನಮ್ಮ ಪಕ್ಷ ರೈತರ ಹಿತಾಸಕ್ತಿ ಕಾಪಾಡಲು ಹೋರಾಡುತ್ತಿದೆ. ಇಂತಹ ಖಾತೆ ಬೇಕೆಂದು ಬೇಡಿಕೆ ಇಡುತ್ತಿಲ್ಲ. ಎನ್ಡಿಎ ನಾಯಕತ್ವ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡೋಣ’ ಎಂದರು.